ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm