ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
23-09-25 08:29 pm
HK News Desk
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am