ಬ್ರೇಕಿಂಗ್ ನ್ಯೂಸ್
24-09-25 07:38 pm Mangalore Correspondent ಕರಾವಳಿ
ಮಂಗಳೂರು, ಸೆ.24: ಧರ್ಮಸ್ಥಳ ಭೂಕಬಳಿಕೆ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಅಕ್ರಮ ಯಾರೇ ಮಾಡಿದರೂ ಸರಕಾರ ಕ್ರಮ ಕೈಗೊಳ್ಳಲಿದೆ. ಎಷ್ಟೇ ದೊಡ್ಡ ವ್ಯಕ್ತಿ ಮಾಡಿದರೂ ಅಕ್ರಮ ಅಕ್ರಮವೇ ಎಂದು ಹೇಳಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಸರಕಾರದ ಮನಸ್ಸಿಗೆ ಬಂದಂತೆ ಯಾರನ್ನೇ ಆದರೂ ಗಡಿಪಾರು ಮಾಡಲಾಗುವುದಿಲ್ಲ. ಅದಕ್ಕೊಂದು ನಿಯಮವಿದೆ. ಕೋರ್ಟ್ ಇದನ್ನು ನಿರ್ಧರಿಸುತ್ತದೆ ಎಂದರು.


ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನ 164 ಹೇಳಿಕೆಯಂತೆ ತನಿಖೆಗೆ ಎಸ್ಐಟಿ ಮಾಡಿರುವುದು ನಮ್ಮ ಸರಕಾರ. ಹಿಂದಿನ ಸರಕಾರ ಇತ್ತಲ್ಲಾ ಅವರಿಗೆ ಮಾಡಬಹುದಿತ್ತಲ್ಲಾ. ನಾವು ಯಾರ ಪರವೂ ಇಲ್ಲ. ಸರಕಾರ ಸತ್ಯದ ಪರವಾಗಿದೆ. ಬಿಜೆಪಿಯವರು ಧರ್ಮಸ್ಥಳ ಚಲೋ ಯಾರಿಗೋಸ್ಕರ ಮಾಡಿದ್ದು, ಧರ್ಮಾಧಿಕಾರಿಯವರ ಮರ್ಯಾದೆ ಉಳಿಸಲಿಕ್ಕಾಗಿ ಅಲ್ವಾ.. ವೇದಿಕೆಯಲ್ಲಿ ಧರ್ಮಾಧಿಕಾರಿಗಳ ಪರವಾಗಿದ್ದವರು, ವೇದಿಕೆ ಇಳಿದ ತಕ್ಷಣ ಸೌಜನ್ಯಾ ಮನೆಗೆ ಹೋಗಿದ್ದಾರಲ್ಲ. ಹಾಗಾದರೆ ಬಿಜೆಪಿ ಯಾರ ಪರವಾಗಿದೆ. ಅಲ್ಲಿ ಸೌಜನ್ಯಾ ಸಂಬಂಧಿಕರು ಯಾರ ಹೆಸರು ಉಲ್ಲೇಖಿಸಿದ್ದರು. ಅದೇ ಬಿಜೆಪಿ ನಾಯಕರು ಸೌಜನ್ಯಾ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ಗೆ ಹೋಗುವಾಗ ಆಕೆಯ ಮನೆಯವರ ಬೆನ್ನೆಲುಬಾಗಿ ನಿಲ್ಲುತ್ತೇವೆ ಎನ್ನುತ್ತಾರೆ. ವೇದಿಕೆ ಇಳಿದಾಗ ವಿರುದ್ಧ, ವೇದಿಕೆ ಹತ್ತಿದಾಗ ಪರ. ಏನು ನಾಟಕವಾಡುತ್ತಿದ್ದಾರೆ ಬಿಜೆಪಿಗರು. ಅವರು ಎರಡೆರಡು ದೋಣಿಯಲ್ಲಿ ಕಾಲಿಡುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಕರಣವನ್ನು ಎಸ್ಐಟಿಗೆ ಒಪ್ಪಿಸಿದ ನಮ್ಮ ಮೇಲೆಯೇ ಅನುಮಾನ ಪಟ್ಟಲ್ಲಿ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಯಾರ ಗರಡಿಯಲ್ಲಿ ಪಳಗಿದವರು. ಅವರು ಕಾಂಗ್ರೆಸ್ನವರಲ್ಲ. ಬಿಜೆಪಿಯವರು, ಸಂಘ ಪರಿವಾರದವರು. ಗಿರೀಶ್ ಮಟ್ಟಣ್ಣನವರ್ ಬಿಜೆಪಿ ಅಧಿಕೃತ ಚುನಾವಣಾ ಅಭ್ಯರ್ಥಿಯಾಗಿ ಬಿ ಫಾರ್ಮ್ ತೆಗೆದುಕೊಂಡವರು. ಅವರು ವಿಧಾನಸೌಧಕ್ಕೆ ಬಾಂಬ್ ಇಟ್ಟ ತಕ್ಷಣ ಭಗತ್ ಸಿಂಗ್ಗೆ ಹೋಲಿಕೆ ಮಾಡಿ ಯುವಮೋರ್ಚಾ ಮಾಡಿದವರು ಬಿಜೆಪಿಯವರೇ. ಆದ್ದರಿಂದ ಇದು ಆರ್ಎಸ್ಎಸ್ V/S ಆರ್ಎಸ್ಎಸ್. ದಯವಿಟ್ಟು ಆರ್ಎಸ್ಎಸ್ ಜಗಳವನ್ನು ಸರಕಾರಕ್ಕೆ ತಂದು ಕಟ್ಟಬೇಡಿ ಎಂದು ಹೇಳಿದರು.
ಎಸ್ಐಟಿ ತನಿಖೆ ನಡೆಯುತ್ತಿದೆ. ಅದರಲ್ಲಿ ಏನಾಗಿದೆ ಎಂದು ಇನ್ನೂ ಗೊತ್ತಿಲ್ಲ. ಮಾಹಿತಿ ಇದ್ದರೆ ಹೇಳಲಿ. ನಾನು ಹೋಗಿ ತಿಳಿಸುತ್ತೇನೆ. ಬಿಜೆಪಿಯವರಿಗೆ ಗೊತ್ತಿದ್ದರೆ ಸಂತೋಷ. ಷಡ್ಯಂತರ ಅಂದರೆ ಏನು ಹೇಳಲಿ. ಏನಾದರೂ ಕಾರಣ ಕೊಡಬೇಕಲ್ಲ. ಅವರು ಯಾರ ಪರವಾಗಿದ್ದಾರೆ. ಸೌಜನ್ಯಾ ಹೋರಾಟಕ್ಕೂ ಎಸ್ ಅನ್ನುತ್ತಾರೆ. ಬಿಜೆಪಿ ಚಲೋ ಕೂಡಾ ಅವರೇ ಮಾಡುತ್ತಾರೆ. ಅವರು ಆರ್ಎಸ್ಎಸ್ V/S ಆರ್ಎಸ್ಎಸ್. ಡಿಬೇಟ್ ನಲ್ಲಿ ಸಿಕ್ಕಿಹಾಕಿಕೊಂಡು ಬಿಟ್ಟಿದ್ದಾರೆ ಎಂದು ಟಾಂಗ್ ನೀಡಿದರು.
Rural Development and Panchayat Raj Minister Priyank Kharge has reacted to the allegations of land encroachment in Dharmasthala, asserting that the government will take action regardless of the stature of the person involved. “Illegal activity is illegal, no matter who commits it. The government will act,” he said.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm