ಬ್ರೇಕಿಂಗ್ ನ್ಯೂಸ್
25-09-25 04:07 pm Mangalore Correspondent ಕರಾವಳಿ
ಮಂಗಳೂರು, ಸೆ.25 : ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.
ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲ್ಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ ಪುಟಾಣಿಗಳು ಮುದ್ದು ಶಾರದೆ, ನವದುರ್ಗೆಯರಾಗಿ ಶೋಭಿಸಿದರು.



ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಟ್ರಸ್ಟಿ ಕೃತಿನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಸದಸ್ಯ ವಾಸುದೇವ ಕೋಟ್ಯಾನ್ , ಪಿ.ಕೆ. ಪೂಜಾರಿ ಗ್ರೂಪ್ನ ಪಿ.ಕೆ ಸತೀಶ್ ಪೂಜಾರಿ, ಗೌರವಿ ರಾಜಶೇಖರ್, ಪಿ.ಕೆ.ಸ್ಮರಣ್ ಪೂಜಾರಿ, ಪ್ರಣವಿ ಪೂಜಾರಿ, ಆಭರಣ ಜ್ಯುವೆಲ್ಲರ್ಸ್ನ ಮಂಗಳೂರು ವಿಭಾಗದ ಮ್ಯಾನೇಜರ್ ಲಕ್ಷ್ಮೀನಾರಾಯಣ ಶೆಣೈ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ಮೊದಲಾದವರಿದ್ದರು. ಚಂದ್ರಹಾಸ ಬಳಂಜ, ವಿಜಯ್ ಕೋಟ್ಯಾನ್ ಪಡು, ಕೀರ್ತನಾ ಸನಿಲ್, ಕೀರ್ತಿರಾಜ್ ಪಡು ಕಾರ್ಯಕ್ರಮ ನಿರೂಪಿಸಿದರು.
ಮುದ್ದು ಶಾರದೆ-ನವದುರ್ಗೆ ವಿಜೇತರು
೬ರಿಂದ ೧೦ ವರ್ಷದೊಳಗಿನ ಮುದ್ದು ಶಾರದೆ ವಿಭಾಗ: ಶಿವಿಕಾ ಡಿಂಪಲ್ (ಪ್ರಥಮ), ಆದ್ಯಾ ವಿ.ಕೋಟ್ಯಾನ್ (ದ್ವಿತೀಯ), ಅನೈರಾ ಎ. ಶೆಟ್ಟಿ, ಶಾನ್ಯ ಗಂಗೊಳ್ಳಿ, ಅದ್ವಿತಿ ಎ. ಪೂಜಾರಿ, ಆನ್ವಿ ಎ., ರೋಷಿನಿ ಡಿ.ಕೆ (ಆಕರ್ಷಕ ಬಹುಮಾನ)
ನವದುರ್ಗೆಯರು: ಶಾನ್ಯ ಬಿ. ಸುವರ್ಣ(ಪ್ರಥಮ), ಋಥ್ವಾ ಎಚ್.ಪಿ (ದ್ವಿತೀಯ), ಕಾಶ್ವಿ, ಚಾರ್ವಿ ಕುಕ್ಯಾನ್, ದಿಯಾ ಡಿ., ಪ್ರಾಂಜಲಿ, ಶಿಪ್ರಾ ಪಿ. ಶೆಟ್ಟಿ (ಆಕರ್ಷಕ ಬಹುಮಾನ) ಮುದ್ದು ಶಾರದೆ ೩-೬ ವರ್ಷ ವಿಭಾಗ: ಶ್ರೀಯಾ ಕೆ.ಕಾಂಚನ್(ಪ್ರಥಮ), ನಕ್ಷತ್ರ ಎಸ್. ಆಚಾರ್ಯ(ದ್ವಿತೀಯ), ವೈ ಆರಾಧ್ಯಾ ಭಟ್, ಶೈವಿ ಸಾಲ್ಯಾನ್, ಓಜಸ್ವಿ, ಜಾನ್ವಿ ಆರ್., ಮನಸ್ವಿ ಡಿ ಪೂಜಾರಿ (ಆಕರ್ಷಕ ಬಹುಮಾನ) ಪಡೆದರು.
The grandeur of Sringeri Sharada Peetha came alive at Kudroli Sri Gokarnanatheshwara Temple on Wednesday, where little children dressed as Goddess Sharade with veenas in hand and radiant smiles, along with the nine forms of Goddess Durga, captivated the audience during the Muddu Sharade and Navadurga competitions held as part of the Mangaluru Dasara celebrations.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm