ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am