ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm