ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm