ಬ್ರೇಕಿಂಗ್ ನ್ಯೂಸ್
25-09-25 07:29 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ ಇದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿ ಎಸ್ ಟಿ ಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿ ಎಸ್ ಟಿ ಗೂ ಹಲವಾರು ವ್ಯತ್ಯಾಸಗಳಿದ್ದವು ಎಂದರು.
ಮುಂದೆ ಬಿಹಾರ ಸೇರಿದಂತೆ ಇತರೇ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್ ಟಿಯನ್ನು ಕಡಿಮೆ ಮಾಡಿದ್ದಾರೆ ಎಂದು ಅವರು ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್, ಚಿತ್ತರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
MLC Manjunath Bhandari questioned the BJP-led central government’s decision to celebrate the reduction in GST rates, pointing out that it was the same government that had initially imposed heavy taxes.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm