ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm