ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.
ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm