ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm