ಕುದ್ರೋಳಿ ; ದಿ. ಸೋಮಸುಂದರಂ ಕುಟುಂಬಸ್ಥರಿಂದ ಕಾಳಭೈರವನಿಗೆ ಬೆಳ್ಳಿ ಪ್ರಭಾವಳಿ ಸಮರ್ಪಣೆ 

26-09-25 05:03 pm       Mangalore Correspondent   ಕರಾವಳಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್‌ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕದ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ದೇವರಿಗೆ ಸಮರ್ಪಿಸಲಾಯಿತು.

ಮಂಗಳೂರು, ಸೆ.26 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್‌ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕದ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ದೇವರಿಗೆ ಸಮರ್ಪಿಸಲಾಯಿತು.

ದಿ.ಸೋಮಸುಂದರಂರವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್.ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.

A silver prabhavali (ornamental arch) weighing 6 kg and costing around ₹9 lakh was offered to Lord Kalabhairava at Shree Gokarnanatha Temple, Kudroli, on Friday by the family of late D. Somasundaram, son of the temple’s founder president, Saavkar Koragappa.