ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಗಾಣಿಗ ನಿಗಮಕ್ಕೆ ವಿಶ್ವಾಸ್ ದಾಸ್ ನೇಮಕ, ಶಾಲೆಟ್ ಪಿಂಟೋ, ಲಾವಣ್ಯ ಬಲ್ಲಾಳ್ ಗೂ ಸ್ಥಾನ 

26-09-25 11:02 pm       Mangalore Correspondent   ಕರಾವಳಿ

ರಾಜ್ಯ ಸರ್ಕಾರ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೂಲದ ಐವರಿಗೆ ಸ್ಥಾನ ನೀಡಿದೆ. 

ಮಂಗಳೂರು, ಸೆ.26 : ರಾಜ್ಯ ಸರ್ಕಾರ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೂಲದ ಐವರಿಗೆ ಸ್ಥಾನ ನೀಡಿದೆ. 

ಮೆಸ್ಕಾಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಎಂ.ಎ.ಗಫೂರ್, ಗಾಣಿಗ ಅಭಿವೃದ್ಧಿ ನಿಗಮಕ್ಕೆ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರನ್ನು ನೇಮಿಸಲಾಗಿದೆ. 

ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಗೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆ ಅಧ್ಯಕ್ಷರಾಗಿ ಲಾವಣ್ಯ ಬಲ್ಲಾಳ್ ಅವರನ್ನು ಆಯ್ಕೆ ಮಾಡಲಾಗಿದೆ.

The state government has appointed chairpersons to 34 boards and corporations, with five leaders from Dakshina Kannada and Udupi districts securing key posts.