ಬ್ರೇಕಿಂಗ್ ನ್ಯೂಸ್
28-09-25 08:12 pm Mangalore Correspondent ಕರಾವಳಿ
ಮಂಗಳೂರು, ಸೆ.28 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯ ಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ನಡೆಯಿತು.
ಮ್ಯಾರಥಾನ್ ನಲ್ಲಿ ಚಿಣ್ಣರಿಂದ ವೃದ್ಧರ ವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಕೇರಳ ಸಹಿತ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21 ಕಿಮೀ ರನ್, ೧೦ ಕಿಮೀ ರನ್, 5 ಕಿಮೀ ರನ್, 2 ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ., 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 2 ಸಾವಿರ ರೂ., ತೃತೀಯ 1 ಸಾವಿರ ರೂ. ನೀಡಲಾಯಿತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಚಾಲನೆ ನೀಡಿದರು. ಯೂನಿಯನ್ ಬ್ಯಾಂಕ್ ಮಂಗಳೂರು ಪ್ರಾದೇಶಿಕ ಮುಖ್ಯಸ್ಥ ನರಸಿಂಹ ಕುಮಾರ್, ವಲಯ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ., ಕುದ್ರೋಳಿ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಅಭಿವೃದ್ಧಿ ಸಮಿತಿ ಸದಸ್ಯ ಲೀಲಾಕ್ಷ ಕರ್ಕೇರಾ, ಜೂಯಿಸ್ ಫಿಟ್ನೆಸ್ ಕ್ಲಬ್ನ ರಾಜೇಶ್ ಪಾಟಾಲಿ ಮತ್ತಿತರರು ಇದ್ದರು.
ಬಹುಮಾನ ವಿಜೇತರು
21 ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗ: ಪ್ರಥಮ-ಲೈಡ್ ಶಫ್ರಂಗ್ ಲಮಾರೆ (01:26:29), ದ್ವಿತೀಯ -ಶಿವಾನಂದ್ (01:29:29:), ತೃತೀಯ: ಕಿರಣ್ ಕುಮಾರ್ ಕುಲಾಲ್ (02:00:56), ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಂದಿನಿ (01:52:23), ದ್ವಿತೀಯ: ಆಶಾ ಪತ್ರೋಸೆ (01:59:02) ತೃತೀಯ: ಸಾಕ್ಷಿ (02:00:57)
10 ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗದಲ್ಲಿ ಪ್ರಥಮ: ಶ್ರೀಧರ್ (48:15), ದ್ವಿತೀಯ: ಐರಪ್ಪ ಹಲಗಣ್ಣನವರ್ (48:42), ತೃತೀಯ: ಘನಶ್ಯಾಮ್ ಪ್ರಸಾದ್ (49:52), ಮಹಿಳೆಯರ ವಿಭಾಗದಲ್ಲಿ ಪ್ರಥಮ: ಚರಿಷ್ಮ (59:47), ದ್ವಿತೀಯ: ಶ್ರೇಯಾ (59:59), ತೃತೀಯ: ಮರಿಯ ಲವೀನ ರೋಡ್ರಿಗಸ್ (01:00:18) ಹಾಗೂ 5 ಕಿ.ಮೀ. ಮ್ಯಾರಥಾನ್ ಪುರಷರ ವಿಭಾಗದಲ್ಲಿ ಪ್ರಥಮ: ಆರ್. ಮಹೇಶ್ (18:12), ದ್ವಿತೀಯ: ಪುನೀತ್ ಕುಮಾರ್ (18:31), ತೃತೀಯ: ನಾಗರಾಜ್ (19:15), ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಾಗಿಣಿ (23:03), ದ್ವಿತೀಯ: ರೇಖ (12:03), ತೃತೀಯ: ರಿತುಶ್ರೀ (26:00)
As part of Mangaluru Dasara-2025 celebrations, the third edition of the state-level marathon was held at Kudroli Shri Gokarnanatheshwara Temple premises. Organized by Joois Fitness Club and Union Bank, the event drew over 2,000 participants from Karnataka and Kerala across 21 km, 10 km, 5 km and 2 km categories. Separate races were held for men and women, with winners awarded cash prizes up to ₹25,000. City Police Commissioner Sudheer Kumar Reddy flagged off the marathon in the presence of dignitaries.
28-09-25 12:39 pm
Bangalore Correspondent
ದಾವಣಗೆರೆಗೆ ಕಾಲಿಟ್ಟ 'ಐ ಲವ್ ಮೊಹಮ್ಮದ್ʼ ಫ್ಲೆಕ್ಸ್...
27-09-25 02:40 pm
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
28-09-25 10:02 pm
HK News Desk
ಮೋದಿ ಕಾರ್ಯಕ್ರಮದಲ್ಲಿ ಸಣ್ಣ ಎಡವಟ್ಟು ; ಹುದ್ದೆ ಕಳಕ...
28-09-25 08:33 pm
ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಘೋರ ದುರಂತ ;...
27-09-25 11:16 pm
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
28-09-25 08:12 pm
Mangalore Correspondent
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
28-09-25 05:04 pm
Mangalore Correspondent
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm
Malpe Onwer Murder, AKMS: ಮಲ್ಪೆಯಲ್ಲಿ ಹಾಡಹಗಲೇ...
27-09-25 02:16 pm
ಐಐಎಸ್ಸಿ ವಿಜ್ಞಾನಿಗೇ ಸೈಬರ್ ದೋಖಾ ; ಮಹಿಳಾ ವಿಜ್ಞಾನ...
27-09-25 01:06 pm