ಬ್ರೇಕಿಂಗ್ ನ್ಯೂಸ್
02-10-25 11:43 am Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರು ದಸರಾ ಸಂಭ್ರಮಕ್ಕೆ ತೆರೆಬೀಳಲು ಕೊನೆ ದಿನ ಇರುವಾಗ ಬುಧವಾರ ರಾತ್ರಿ 11 ಗಂಟೆಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.
ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪ ಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಉಪ ಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ. ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್ (ಮೆಸ್ಕಾಂ ಅಧ್ಯಕ್ಷರು), ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್.ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
On the final evening of the Mangaluru Dasara festivities, Karnataka Deputy Chief Minister D.K. Shivakumar paid a late-night visit to the historic Kudroli Gokarnanatheshwara Temple on Wednesday.
02-10-25 02:28 pm
Bangalore Correspondent
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm