ಬ್ರೇಕಿಂಗ್ ನ್ಯೂಸ್
27-12-20 08:39 pm Mangaluru Correspondent ಕರಾವಳಿ
ಮಂಗಳೂರು, ಡಿ.27: ರಾಷ್ಟ್ರ ಮಟ್ಟದ ಮಾಜಿ ಕಬಡ್ಡಿ ಆಟಗಾರ, ಶಿಕ್ಷಣ ಪ್ರೇಮಿಯಾಗಿದ್ದ ರತ್ನಾಕರ ಪುತ್ರನ್ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಮಂಗಳೂರಿನ ಬೊಕ್ಕಪಟ್ಣದ ದೇವಪ್ಪ ಕರ್ಕೇರ ಮತ್ತು ಸೇಸಮ್ಮ ಪುತ್ರನ್ ದಂಪತಿಯ ಪುತ್ರನಾಗಿ ಜನಿಸಿದ್ದ ರತ್ನಾಕರ ಪುತ್ರನ್ ಅವರು ಬೊಕ್ಕಪಟ್ಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದಿದ್ದರು. ಮಂಗಳೂರು ಡೊಂಗರಕೇರಿಯ ಕೆನರಾ ಮೈನ್ನಲ್ಲಿ ಪ್ರೌಢಶಿಕ್ಷಣ, ಸಂತ ಅಲೋಷಿಯಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದರು. ಕಬಡ್ಡಿಯಲ್ಲಿ ಸಾಕಷ್ಟು ಸಾಧನೆ ಮಾಡಿರುವ ರತ್ನಾಕರ ಪುತ್ರನ್ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ. ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದ ಪ್ರಮುಖ ಆಟಗಾರರಾಗಿದ್ದರು. ಕಬಡ್ಡಿಯ ಜೊತೆಗೆ ಉತ್ತಮ ಕ್ರಿಕೆಟ್ ಪಟುವೂ ಆಗಿದ್ದರು. ಆ ಸಮಯದಲ್ಲಿ ರಬ್ಬರ್ ಬಾಲ್ ಕ್ರಿಕೆಟ್ ಜನಪ್ರಿಯತೆಯನ್ನು ಗಳಿಸಿದ್ದು, ಕ್ರಿಕೆಟ್ನಲ್ಲೂ ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದರು.
ತಾನು ಕಲಿತ ಬೊಕ್ಕಪಟ್ಣ ಶಾಲೆಯನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪುಸ್ತಕ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದ್ದರು. ಜೊತೆಗೆ ತಮ್ಮದೇ ಖರ್ಚಿನಲ್ಲಿ ಶಾಲೆಗೆ ಗೌರವ ಶಿಕ್ಷಕರನ್ನು ನೇಮಿಸಿ ಆ ಮೂಲಕ ಶಾಲೆಯ ಉಳಿವಿಗೆ ಪ್ರಯತ್ನಿಸಿದ್ದರು.
2014ರಲ್ಲಿ ಮಂಗಳೂರಿನಲ್ಲಿ 26 ಸೌತ್ ಝೋನ್ ಸೀನಿಯರ್ ನ್ಯಾಷನಲ್ ಹ್ಯಾಂಡ್ಬಾಲ್ ಚಾಂಪಿಯನ್ಶಿಪ್ ಆಯೋಜಿಸಿದ್ದರು. ಬೀಚ್ ಕಬಡ್ಡಿ ಟೂರ್ನ್ಮೆಂಟ್ ಎನ್ನುವ ವಿನೂತನ ಪರಿಕಲ್ಪನೆಯ ಕಬಡ್ಡಿ ಪಂದ್ಯಾಟವನ್ನೂ ಆಯೋಜನೆ ಮಾಡಿರುವುದು ರತ್ನಾಕರ ಪುತ್ರನ್ ಹೆಗ್ಗಳಿಕೆಯಾಗಿತ್ತು.
ರತ್ನಾಕರ ಪುತ್ರನ್ ನಾಟಕಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದರು. ಅವರ ಆಕರ್ಷಕ ಮೈಕಟ್ಟು ಪಾತ್ರಗಳಿಗೆ ಜೀವವನ್ನು ತುಂಬುತ್ತಿತ್ತು. ಜೊತೆಗೆ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದರು. ತನ್ನ ತಾಯಿಯ ಹೆಸರಿನಲ್ಲಿ ಸೇಸ್ಮಾ ಮೆಡಿಕಲ್ ಸ್ಟೋರ್ ಮತ್ತು ವೈನ್ಸ್ಟೋರ್ ಹೊಂದಿದ್ದರು.
Mangalore Former National Kabbadi player, Artist and Businessman Rathnakar Puthran is no more.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm