ಬ್ರೇಕಿಂಗ್ ನ್ಯೂಸ್
03-10-25 11:07 pm Mangalore Correspondent ಕರಾವಳಿ
ಮಂಗಳೂರು, ಅ.3 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ನಾಲ್ಕು ದಿನಗಳ ಪರ್ಯಂತ ಶ್ರೀ ದೇವಿಯ ಮೃತಿಕಾ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ ಪ್ರತಿದಿನ ಮಾತೆಯ ವಿಗ್ರಹಕ್ಕೆ ವಿಶೇಷ ಸರಸ್ವತಿ , ದುರ್ಗಾ, ಚಂಡಿಕಾ ದೇವಿ ಅಲಂಕಾರದೊಂದಿಗೆ ಅಲಂಕರಿಸಿ ಕೊನೆಯ ದಿನಂದಂದು ಶಾರದಾ ಮಾತೆಯ ಅಲಂಕಾರದಿಂದ ಶೃಂಗರಿಸಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವಿಶೇಷ ಹರಕೆಯ ಹುಲಿ ವೇಷಧಾರಿಗಳಿಂದ ಹುಲಿವೇಷ ನರ್ತನ ಸೇವೆ, ಕೇರಳದ ಸುಪ್ರಸಿದ್ದ ಚೆಂಡೆ ವಾದನ, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.







ದೇವಳದ ಸ್ವಯಂಸೇವಕರಿಂದ ಶಾರದಾ ಮಾತೆಯ ವಿಗ್ರಹಕ್ಕೆ ಭುಜ ಸೇವೆಯೊಂದಿಗೆ ಪ್ರಾರಂಭಗೊಂಡು ಶ್ರೀ ವೆಂಕಟರಮಣ ದೇವಳದಿಂದ ಹೊರಟು ಗದ್ದೆಕೇರಿ , ನವಭಾರತ್ ವೃತ್ತ , ಡೋಂಗೇರಕೇರಿ , ನ್ಯೂ ಚಿತ್ರ ಜುಂಕ್ಷನ್, ಕೆಳಗಿನ ಕಾರ್ಸ್ಟ್ರೀಟ್ , ರಥಬೀದಿಯಲ್ಲಿ ಶೋಭಾಯಾತ್ರೆ ನಡೆದು ಮಹಾಮಾಯ ತೀರ್ಥದಲ್ಲಿ ಜಲಸ್ತಂಭನ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಕಾಶೀನಾಥ್ ಆಚಾರ್ಯ, ಸುರೇಶ್ ಆಚಾರ್ಯ , ಜಯಂತ್ ಆಚಾರ್ಯ, ಶಾರದಾ ಮಹೋತ್ಸವ ಸಮಿತಿಯ ಜಿ . ದತ್ತಾತ್ರೇಯ ಭಟ್ , ಸುರೇಶ್ ವಿ ಕಾಮತ್, ಸತೀಶ್ ಪ್ರಭು, ಗಣೇಶ್ ಬಾಳಿಗಾ, ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಗಣೇಶ್ ಕಾಮತ್ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ದೇಶ, ವಿದೇಶಗಳಿಂದ ಸಹಸ್ರಾರು ಶ್ರೀ ಮಾತೆಯ ಭಜಕರು ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 103rd Sharada Mahotsava at Sri Venkataramana Temple and Acharya Math in Mangaluru’s Car Street concluded with grandeur on Friday. Over four days, the idol of Goddess Sharada was adorned in various forms — Saraswati, Durga, Chandika, and finally Sharada Mata — before being taken in a vibrant procession.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm