ಬ್ರೇಕಿಂಗ್ ನ್ಯೂಸ್
03-10-25 11:07 pm Mangalore Correspondent ಕರಾವಳಿ
ಮಂಗಳೂರು, ಅ.3 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ನಾಲ್ಕು ದಿನಗಳ ಪರ್ಯಂತ ಶ್ರೀ ದೇವಿಯ ಮೃತಿಕಾ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ ಪ್ರತಿದಿನ ಮಾತೆಯ ವಿಗ್ರಹಕ್ಕೆ ವಿಶೇಷ ಸರಸ್ವತಿ , ದುರ್ಗಾ, ಚಂಡಿಕಾ ದೇವಿ ಅಲಂಕಾರದೊಂದಿಗೆ ಅಲಂಕರಿಸಿ ಕೊನೆಯ ದಿನಂದಂದು ಶಾರದಾ ಮಾತೆಯ ಅಲಂಕಾರದಿಂದ ಶೃಂಗರಿಸಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವಿಶೇಷ ಹರಕೆಯ ಹುಲಿ ವೇಷಧಾರಿಗಳಿಂದ ಹುಲಿವೇಷ ನರ್ತನ ಸೇವೆ, ಕೇರಳದ ಸುಪ್ರಸಿದ್ದ ಚೆಂಡೆ ವಾದನ, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.







ದೇವಳದ ಸ್ವಯಂಸೇವಕರಿಂದ ಶಾರದಾ ಮಾತೆಯ ವಿಗ್ರಹಕ್ಕೆ ಭುಜ ಸೇವೆಯೊಂದಿಗೆ ಪ್ರಾರಂಭಗೊಂಡು ಶ್ರೀ ವೆಂಕಟರಮಣ ದೇವಳದಿಂದ ಹೊರಟು ಗದ್ದೆಕೇರಿ , ನವಭಾರತ್ ವೃತ್ತ , ಡೋಂಗೇರಕೇರಿ , ನ್ಯೂ ಚಿತ್ರ ಜುಂಕ್ಷನ್, ಕೆಳಗಿನ ಕಾರ್ಸ್ಟ್ರೀಟ್ , ರಥಬೀದಿಯಲ್ಲಿ ಶೋಭಾಯಾತ್ರೆ ನಡೆದು ಮಹಾಮಾಯ ತೀರ್ಥದಲ್ಲಿ ಜಲಸ್ತಂಭನ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಕಾಶೀನಾಥ್ ಆಚಾರ್ಯ, ಸುರೇಶ್ ಆಚಾರ್ಯ , ಜಯಂತ್ ಆಚಾರ್ಯ, ಶಾರದಾ ಮಹೋತ್ಸವ ಸಮಿತಿಯ ಜಿ . ದತ್ತಾತ್ರೇಯ ಭಟ್ , ಸುರೇಶ್ ವಿ ಕಾಮತ್, ಸತೀಶ್ ಪ್ರಭು, ಗಣೇಶ್ ಬಾಳಿಗಾ, ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಗಣೇಶ್ ಕಾಮತ್ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ದೇಶ, ವಿದೇಶಗಳಿಂದ ಸಹಸ್ರಾರು ಶ್ರೀ ಮಾತೆಯ ಭಜಕರು ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 103rd Sharada Mahotsava at Sri Venkataramana Temple and Acharya Math in Mangaluru’s Car Street concluded with grandeur on Friday. Over four days, the idol of Goddess Sharada was adorned in various forms — Saraswati, Durga, Chandika, and finally Sharada Mata — before being taken in a vibrant procession.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am