ಬ್ರೇಕಿಂಗ್ ನ್ಯೂಸ್
03-10-25 11:07 pm Mangalore Correspondent ಕರಾವಳಿ
ಮಂಗಳೂರು, ಅ.3 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ನಾಲ್ಕು ದಿನಗಳ ಪರ್ಯಂತ ಶ್ರೀ ದೇವಿಯ ಮೃತಿಕಾ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ ಪ್ರತಿದಿನ ಮಾತೆಯ ವಿಗ್ರಹಕ್ಕೆ ವಿಶೇಷ ಸರಸ್ವತಿ , ದುರ್ಗಾ, ಚಂಡಿಕಾ ದೇವಿ ಅಲಂಕಾರದೊಂದಿಗೆ ಅಲಂಕರಿಸಿ ಕೊನೆಯ ದಿನಂದಂದು ಶಾರದಾ ಮಾತೆಯ ಅಲಂಕಾರದಿಂದ ಶೃಂಗರಿಸಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವಿಶೇಷ ಹರಕೆಯ ಹುಲಿ ವೇಷಧಾರಿಗಳಿಂದ ಹುಲಿವೇಷ ನರ್ತನ ಸೇವೆ, ಕೇರಳದ ಸುಪ್ರಸಿದ್ದ ಚೆಂಡೆ ವಾದನ, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.







ದೇವಳದ ಸ್ವಯಂಸೇವಕರಿಂದ ಶಾರದಾ ಮಾತೆಯ ವಿಗ್ರಹಕ್ಕೆ ಭುಜ ಸೇವೆಯೊಂದಿಗೆ ಪ್ರಾರಂಭಗೊಂಡು ಶ್ರೀ ವೆಂಕಟರಮಣ ದೇವಳದಿಂದ ಹೊರಟು ಗದ್ದೆಕೇರಿ , ನವಭಾರತ್ ವೃತ್ತ , ಡೋಂಗೇರಕೇರಿ , ನ್ಯೂ ಚಿತ್ರ ಜುಂಕ್ಷನ್, ಕೆಳಗಿನ ಕಾರ್ಸ್ಟ್ರೀಟ್ , ರಥಬೀದಿಯಲ್ಲಿ ಶೋಭಾಯಾತ್ರೆ ನಡೆದು ಮಹಾಮಾಯ ತೀರ್ಥದಲ್ಲಿ ಜಲಸ್ತಂಭನ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಕಾಶೀನಾಥ್ ಆಚಾರ್ಯ, ಸುರೇಶ್ ಆಚಾರ್ಯ , ಜಯಂತ್ ಆಚಾರ್ಯ, ಶಾರದಾ ಮಹೋತ್ಸವ ಸಮಿತಿಯ ಜಿ . ದತ್ತಾತ್ರೇಯ ಭಟ್ , ಸುರೇಶ್ ವಿ ಕಾಮತ್, ಸತೀಶ್ ಪ್ರಭು, ಗಣೇಶ್ ಬಾಳಿಗಾ, ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಗಣೇಶ್ ಕಾಮತ್ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ದೇಶ, ವಿದೇಶಗಳಿಂದ ಸಹಸ್ರಾರು ಶ್ರೀ ಮಾತೆಯ ಭಜಕರು ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 103rd Sharada Mahotsava at Sri Venkataramana Temple and Acharya Math in Mangaluru’s Car Street concluded with grandeur on Friday. Over four days, the idol of Goddess Sharada was adorned in various forms — Saraswati, Durga, Chandika, and finally Sharada Mata — before being taken in a vibrant procession.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm