ಬ್ರೇಕಿಂಗ್ ನ್ಯೂಸ್
03-10-25 11:07 pm Mangalore Correspondent ಕರಾವಳಿ
ಮಂಗಳೂರು, ಅ.3 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ನಾಲ್ಕು ದಿನಗಳ ಪರ್ಯಂತ ಶ್ರೀ ದೇವಿಯ ಮೃತಿಕಾ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ ಪ್ರತಿದಿನ ಮಾತೆಯ ವಿಗ್ರಹಕ್ಕೆ ವಿಶೇಷ ಸರಸ್ವತಿ , ದುರ್ಗಾ, ಚಂಡಿಕಾ ದೇವಿ ಅಲಂಕಾರದೊಂದಿಗೆ ಅಲಂಕರಿಸಿ ಕೊನೆಯ ದಿನಂದಂದು ಶಾರದಾ ಮಾತೆಯ ಅಲಂಕಾರದಿಂದ ಶೃಂಗರಿಸಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವಿಶೇಷ ಹರಕೆಯ ಹುಲಿ ವೇಷಧಾರಿಗಳಿಂದ ಹುಲಿವೇಷ ನರ್ತನ ಸೇವೆ, ಕೇರಳದ ಸುಪ್ರಸಿದ್ದ ಚೆಂಡೆ ವಾದನ, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.







ದೇವಳದ ಸ್ವಯಂಸೇವಕರಿಂದ ಶಾರದಾ ಮಾತೆಯ ವಿಗ್ರಹಕ್ಕೆ ಭುಜ ಸೇವೆಯೊಂದಿಗೆ ಪ್ರಾರಂಭಗೊಂಡು ಶ್ರೀ ವೆಂಕಟರಮಣ ದೇವಳದಿಂದ ಹೊರಟು ಗದ್ದೆಕೇರಿ , ನವಭಾರತ್ ವೃತ್ತ , ಡೋಂಗೇರಕೇರಿ , ನ್ಯೂ ಚಿತ್ರ ಜುಂಕ್ಷನ್, ಕೆಳಗಿನ ಕಾರ್ಸ್ಟ್ರೀಟ್ , ರಥಬೀದಿಯಲ್ಲಿ ಶೋಭಾಯಾತ್ರೆ ನಡೆದು ಮಹಾಮಾಯ ತೀರ್ಥದಲ್ಲಿ ಜಲಸ್ತಂಭನ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಕಾಶೀನಾಥ್ ಆಚಾರ್ಯ, ಸುರೇಶ್ ಆಚಾರ್ಯ , ಜಯಂತ್ ಆಚಾರ್ಯ, ಶಾರದಾ ಮಹೋತ್ಸವ ಸಮಿತಿಯ ಜಿ . ದತ್ತಾತ್ರೇಯ ಭಟ್ , ಸುರೇಶ್ ವಿ ಕಾಮತ್, ಸತೀಶ್ ಪ್ರಭು, ಗಣೇಶ್ ಬಾಳಿಗಾ, ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಗಣೇಶ್ ಕಾಮತ್ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ದೇಶ, ವಿದೇಶಗಳಿಂದ ಸಹಸ್ರಾರು ಶ್ರೀ ಮಾತೆಯ ಭಜಕರು ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 103rd Sharada Mahotsava at Sri Venkataramana Temple and Acharya Math in Mangaluru’s Car Street concluded with grandeur on Friday. Over four days, the idol of Goddess Sharada was adorned in various forms — Saraswati, Durga, Chandika, and finally Sharada Mata — before being taken in a vibrant procession.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm