ಬ್ರೇಕಿಂಗ್ ನ್ಯೂಸ್
06-10-25 02:58 pm Mangalore Correspondent ಕರಾವಳಿ
ಮಂಗಳೂರು, ಅ.6 : ಟ್ರಾಫಿಕ್ ಸಿಬಂದಿಯೊಬ್ಬರು ಕರ್ತವ್ಯ ಸಂದರ್ಭದಲ್ಲಿ ಕುಡಿದು ಕಾರು ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯನ್ನು ನಿಲ್ಲಿಸಲು ಯತ್ನಿಸಿದಾಗ ಕಾರಿನ ಹಿಂಬದಿ ಗಾಜು ಒಡೆದು ಹೋದ ಘಟನೆ ನಗರದ ನಂತೂರಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅ.2ರಂದು ರಾತ್ರಿ ಕುದ್ರೋಳಿ ದಸರಾ ಮೆರವಣಿಗೆಯಿದ್ದ ಸಂದರ್ಭದಲ್ಲಿ ನಂತೂರಿನಲ್ಲಿ ತಡರಾತ್ರಿ ಘಟನೆ ನಡೆದಿದೆ. ಪಂಪ್ವೆಲ್ ಕಡೆಯಿಂದ ಬಂದಿದ್ದ ಕಾರನ್ನು ಅಲ್ಲಿದ್ದ ಪೊಲೀಸ್ ಸಿಬಂದಿ ನಿಲ್ಲಿಸಲು ಸೂಚಿಸಿದ್ದು, ನಿಲ್ಲಿಸದೇ ಇದ್ದಾಗ ಕಾರಿನ ಹಿಂಬದಿಗೆ ಕೈಯಲ್ಲಿ ಬಡಿದಿದ್ದಾರೆ. ಈ ವೇಳೆ, ಕಾರಿನ ಹಿಂಬದಿಯ ಗ್ಲಾಸ್ ಒಡೆದಿದ್ದು, ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಪೊಲೀಸರನ್ನು ತರಾಟೆಗೆತ್ತಿಕೊಂಡಿದ್ದಾರೆ. ಅಲ್ಲಿದ್ದ ಒಬ್ಬರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆ ಮಾಡುವ ವಿಡಿಯೋ ಇದೆ.


ವಿಡಿಯೋ ವೈರಲ್ ಆಗುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಸದ್ರಿ ಘಟನೆ ಹಿನ್ನೆಲೆಯಲ್ಲಿ ಕದ್ರಿ ಸಂಚಾರಿ ಠಾಣೆಯಲ್ಲಿ ಡ್ರಂಕ್ ಆಂಡ್ ಡ್ರೈವ್ ಕೇಸು ದಾಖಲಾಗಿದೆ. ಅಲ್ಲದೆ, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಶಿವಪ್ರಸಾದ್ ಎಂಬವನಾಗಿದ್ದು, 2018ರಲ್ಲಿ ನಡೆದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ. ಅಲ್ಲದೆ, ಬರ್ಕೆ ಠಾಣೆಯಲ್ಲಿ ರೌಡಿಶೀಟರ್ ಹೊಂದಿದ್ದಾನೆ.
ಪೊಲೀಸರು ಕರ್ತವ್ಯ ಲೋಪ ಮಾಡಿದ್ದಾರೆಂದು ಬಿಂಬಿಸಿ ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಮಾಡುವುದು ರೌಡಿಯೊಬ್ಬನಿಗೆ ಸಪೋರ್ಟ್ ಮಾಡಿದಂತಾಗುತ್ತದೆ. ಆ ಬಗ್ಗೆ ಪೊಲೀಸರಿಗೆ ವಿವರಣೆ ಕೊಡಬೇಕಾಗುತ್ತದೆ. ಸದ್ರಿ ಘಟನೆ ಹೇಗಾಗಿದೆ ಎನ್ನುವುದು ತಿಳಿಯಬೇಕಷ್ಟೆ. ಆದರೆ ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸ್ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಪೊಲೀಸರ ವಿರುದ್ಧ ಅನ್ನುವ ಕಾರಣಕ್ಕೆ ತಾವೇ ನ್ಯಾಯ ತೀರ್ಮಾನ ಮಾಡಿಕೊಂಡು ವಿಡಿಯೋ ವೈರಲ್ ಮಾಡುವುದು ಸರಿ ಎನಿಸುವುದಿಲ್ಲ ಎಂದು ಕಮಿಷನರ್ ಹೇಳಿದ್ದಾರೆ.
ತಡರಾತ್ರಿ ವೇಳೆ ಮೆರವಣಿಗೆ ನೋಡಿ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆಯಾಗಿದ್ದು, ಶಿವಪ್ರಸಾದ್ ಆಪ್ತರು ಸೇರಿ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದು ವಿಡಿಯೋದಲ್ಲಿದೆ. ಏನ್ ರೌಡಿಸಂ ಮಾಡುತ್ತಿದ್ದೀರಾ, ಗಾಡಿಗೆ ಒಡೆದಿದ್ದು ಯಾಕೆ. ತಪ್ಪಾಗಿದ್ದರೆ ಕೇಸ್ ಹಾಕಿ, ಅದು ಬಿಟ್ಟು ಗಾಡಿಗೆ ಒಡೆದು ಗ್ಲಾಸ್ ಪುಡಿ ಮಾಡಿದ್ದು ಯಾಕೆಂದು ಜನರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಕದ್ರಿ ಸಂಚಾರಿ ವಿಭಾಗದ ಪೊಲೀಸರಲ್ಲಿ ಕೇಳಿದಾಗ, ಅದು ಗ್ಲಾಸ್ ಒಡೆದಿದ್ದು ಹೇಗೆಂದು ತಿಳಿಯುತ್ತಿಲ್ಲ. ಬಿರುಕು ಬಿಟ್ಟಿತ್ತೋ ಏನೋ.. ಕೈಯಲ್ಲಿ ಒಡೆದಾಗ ಹಾಗೆಲ್ಲ ಗಾಜು ಒಡೆದು ಹೋಗಲ್ಲ ಎಂದಿದ್ದಾರೆ.
A drunk driving #murder accused crashes into controversy in #Mangaluru! 🚨 When traffic cops tried to stop his car, a rear window shattered — public outrage followed. But guess what? The driver is an accused in the RTI activist #baliga murder case & a known rowdy.#mangalorepolice pic.twitter.com/nGw1V48trI
— Headline Karnataka (@hknewsonline) October 6, 2025
A late-night incident in Mangaluru’s Nanthoor, where a traffic cop tried to stop a car and its rear glass broke, has gone viral on social media. The video shows the public confronting the police, sparking debate. It was later revealed that the driver was Shivaprasad, a rowdy-sheeter and key accused in the 2018 RTI activist Vinayak Baliga murder case.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am