ಬ್ರೇಕಿಂಗ್ ನ್ಯೂಸ್
06-10-25 07:19 pm Mangalore Correspondent ಕರಾವಳಿ
ಮಂಗಳೂರು, ಅ.6 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ PM-ABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಆಯುಷ್ಮಾನ್ ಭಾರತ್ ಹೆಲ್ತ್ ಸೆಂಟರ್ ಸ್ಥಾಪನೆಗೂ ತಲಾ 65 ಲಕ್ಷ ರೂ. ಮಂಜೂರಾಗಿದ್ದು, ಅದರಡಿ ಸೂಕ್ತ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಒಟ್ಟು 38 ಊರುಗಳಲ್ಲಿ ನೂತನ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಂಸದ ಕ್ಯಾ.ಚೌಟ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಯಿಂದ ಗ್ರಾಮೀಣ ಭಾಗದ ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ. ಜತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳೇ ಇಲ್ಲದ ಊರುಗಳಿಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಧಾನಮಂತ್ರಿಗಳ ಈ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ನೆರವಾಗಲಿವೆ. ಹೀಗಾಗಿ, ಈ ಎಚ್ಡಬ್ಲ್ಯುಸಿ ಕೇಂದ್ರಗಳ ಸ್ಥಾಪನೆಗೆ ಅನುದಾನ ಮಂಜೂರು ಮಾಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹಾಗೂ ಆರೋಗ್ಯ ಸಚಿವಾಲಯಕ್ಕೆ ಧನ್ಯವಾದ ಸಲ್ಲಿಸುವುದಾಗಿ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.
38 HWC ಕೇಂದ್ರಗಳು ಹೀಗಿವೆ
ಪುತ್ತೂರು ತಾಲೂಕಿನ ಕೈಕಂಬ, ಪಡ್ನೂರು, ನೆಟ್ಟಾರು, ಕುರಿಯ, ಕುಟ್ರುಪಾಡಿ ಮತ್ತು ನೆಕ್ಕಿಲಾಡಿ. ಸುಳ್ಯದ ಐನಕಿದು, ನೆಲ್ಲೂರು ಕೆಮ್ರಾಜೆ, ಸುಳ್ಯ-ಡಿ, ತೋಡಿಕಾನ, ಸುಳ್ಯ-ಎ, ಸುಳ್ಯ-ಬಿ ಮತ್ತು ಸುಳ್ಯ-ಸಿ. ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಮಂಗಿಲಪದವು, ಮೂಡುಪಡುಕೋಡಿ, ಸರಪಾಡಿ, ವೀರಕಂಬ, ಸಜಿಪಪಡು, ವಿಟ್ಲ ಮುನ್ನೂರು (ಶಂಭೂರು), ಕುರಿಯಾಳ ಮತ್ತು ಪೊಳಲಿ.
ಬೆಳ್ತಂಗಡಿ ತಾಲೂಕಿನ ಕುತ್ಲೂರು, ನಾಲ್ಕೂರು, ತೆಂಕ ಕರಂದೂರು, ಲಾಯಿಲ- ಎ, ನ್ಯಾಯತರ್ಪು ಮತ್ತು ಪುದುವೆಟ್ಟು. ಮಂಗಳೂರು ತಾಲೂಕಿನ ಕೆಂಜಾರು, ಮನ್ನಬೆಟ್ಟು, ಮೂಡುಶೆಡ್ಡೆ ಮತ್ತು ಕೊಲ್ಲೂರು. ಮೂಡುಬಿದಿರೆಯ ವಾಲ್ಪಾಡಿ, ಮಾರ್ಪಾಡಿ-ಎ, ಮಾರ್ಪಾಡಿ-ಬಿ, ತೋಕೂರು ಪ್ರಾಂತ್ಯ-ಬಿ ಮತ್ತು ಪ್ರಾಂತ್ಯ-ಸಿ.
Under the Prime Minister’s Ayushman Bharat Health Infrastructure Mission (PM-ABHIM), ₹24.70 crore has been sanctioned for setting up 38 Ayushman Bharat–Health and Wellness Centres (HWC) across Dakshina Kannada district, MP Brijesh Chowta announced. Each centre will receive ₹65 lakh for construction and essential healthcare infrastructure.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm