ಬ್ರೇಕಿಂಗ್ ನ್ಯೂಸ್
09-10-25 01:59 pm Udupi Correspondent ಕರಾವಳಿ
ಉಡುಪಿ, ಅ.9 : 13 ವರ್ಷಗಳ ಹಿಂದೆ ಪಿಯುಸಿ ಕಲಿಯುತ್ತಿದ್ದಾಗ ಕಾಣೆಯಾಗಿದ್ದ ಯುವಕನನ್ನು ಉಡುಪಿ ಪೊಲೀಸರು ಹುಡುಕಾಡಿ ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು ಯುವಕನನ್ನು ಮತ್ತೆ ಮನೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಕಾರ್ಕಳ ತಾಲೂಕಿನ ಮುಂಡ್ಕೂರು ಬಳಿಯ ನಿವಾಸಿ ಪ್ರಭಾಕರ ಪ್ರಭು ಎಂಬವರ ಮಗ ಅನಂತಕೃಷ್ಣ ಪ್ರಭು(16) 13 ವರ್ಷಗಳ ಬಳಿಕ ಮರಳಿ ಗೂಡು ಸೇರಿದ ಯುವಕ. 2012 ಡಿಸೆಂಬರ್ 6ರಂದು ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಗ ಮನೆಯಿಂದ ದೇವಸ್ಥಾನಕ್ಕೆಂದು ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದ. ಈ ಬಗ್ಗೆ ಅವರ ತಂದೆ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನೆಯವರಿಗೆ ಹೆದರಿ ಮತ್ತು ಮುಖ ತೋರಿಸಲಾಗದೆ ಮನೆಯಿಂದ ತಪ್ಪಿಸಿಕೊಂಡಿದ್ದ. ಯಾವುದೇ ಸುಳಿವು ಲಭಿಸದ ಕಾರಣ ಪೊಲೀಸರು ಹುಡುಕಾಟ ಕೈಬಿಟ್ಟಿದ್ದರು. ವಿಶೇಷ ತನಿಖಾ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು. ಇತ್ತೀಚೆಗೆ ಯುವಕ ಬೆಂಗಳೂರಿನಲ್ಲಿ ವಾಸವಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ, ಅನಂತಕೃಷ್ಣ (29) ನನ್ನು ಭೇಟಿ ಮಾಡಿದ್ದರು. ಅಲ್ಲಿಂದ ಉಡುಪಿಗೆ ಕರೆತಂದು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. 13 ವರ್ಷಗಳಿಂದ ಪತ್ತೆಯಾಗದೇ ಇರುವ ಹಳೆ ಪ್ರಕರಣವನ್ನು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೂಚನೆಯಂತೆ, ಡಿವೈಎಸ್ಪಿ ಪ್ರಭು ಡಿ.ಟಿ, ಬ್ರಹ್ಮಾವರ ಎಸ್ಐ ಸುದರ್ಶನ್ ದೊಡ್ಮನಿ, ಉಡುಪಿ ನಗರ ಎಸ್ಐ ಈರಣ್ಣ ಶಿರಗುಂಪಿ, ಹೆಡ್ ಕಾನ್ಸ್ಟೇಬಲ್ ಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಭೇದಿಸಲು ಯಶಸ್ವಿಯಾಗಿದೆ.
ಪತ್ತೆಯಾಗದ ಹಳೆ ಪ್ರಕರಣಗಳನ್ನು ಕೆದಕಿ, ಕೇಸ್ ಪತ್ತೆ ಮಾಡುವ ಬಗ್ಗೆ ಎಸ್ಪಿ ಹರಿರಾಮ್ ಟಾಸ್ಕ್ ನೀಡಿದ್ದಾರೆ.
A young man who went missing 13 years ago while studying in PUC has finally been reunited with his family, thanks to the efforts of the Udupi police who traced him in Bengaluru.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm