ಬ್ರೇಕಿಂಗ್ ನ್ಯೂಸ್
09-10-25 07:23 pm Mangalore Correspondent ಕರಾವಳಿ
ಮಂಗಳೂರು, ಅ.9 : ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ನಿರೀಕ್ಷಣಾ ಜಾಮೀನು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಶನ್ಸ್ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಧೀಶ ಬಸವರಾಜು ವಜಾಗೊಳಿಸಿದ್ದಾರೆ.
ಸೆ.27ರಿಂದ ನಿರಂತರವಾಗಿ ಮಹೇಶ್ ಶೆಟ್ಟಿ ಪರವಾಗಿ ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಜುಡಿತ್ ಮಸ್ಕರೇನಸ್ ಅವರು ವಾದಿಸಿದ್ದರು. ಎರಡೂ ಕಡೆಯ ವಾದ ಆಲಿಸಿದ್ದ ನ್ಯಾಯಾಧೀಶರು ಅ.9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಇದೀಗ ಸಂಜೆಯ ವೇಳೆಗೆ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ. ಯಾವ ಆಧಾರದಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎನ್ನುವ ಬಗ್ಗೆ ಆದೇಶದ ಪ್ರತಿಯನ್ನು ನೋಡಿಯೇ ಹೇಳಬೇಕು ಎಂದು ವಕೀಲ ದಿನೇಶ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಎಸ್ಐಟಿ ಪೊಲೀಸರು ಸೆ.16ರಂದು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದಾಗ ಎರಡು ತಲವಾರು ಮತ್ತು ಏರ್ ಗನ್ ಪತ್ತೆಯಾಗಿತ್ತು. ಈ ಕಾರಣದಿಂದ ವಿಚಾರಣೆಗೆ ಹಾಜರಾಗಬೇಕೆಂದು ಎಸ್ಐಟಿ ನೋಟಿಸ್ ಮಾಡಿತ್ತು.
ಇದರ ನೆಪದಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧಿಸುವ ಸಾಧ್ಯತೆ ಇದ್ದುದರಿಂದ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದು, ಹೋರಾಟಗಾರರ ತಂಡಕ್ಕೆ ನಿರಾಸೆ ಮೂಡಿಸಿದೆ. ಈಗಾಗಲೇ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಶಸ್ತ್ರಾಸ್ತ್ರ ಪ್ರಕರಣದಲ್ಲಿಯೂ ಇನ್ನು ಹೈಕೋರ್ಟಿನಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ಕೋರ್ಟಿಗೆ ಶರಣಾಗಬೇಕಾಗುತ್ತದೆ.
In a major setback for activist Mahesh Shetty Timarodi, the Dakshina Kannada District and Sessions Court has rejected his anticipatory bail plea in connection with the illegal arms case. The order was delivered by Judge Basavaraju after hearing arguments from senior advocate Dinesh Hegde Ulepady, representing Mahesh Shetty, and government prosecutor Judith Mascarenhas.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm