ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm