ಬ್ರೇಕಿಂಗ್ ನ್ಯೂಸ್
11-10-25 11:11 am Mangalore Correspondent ಕರಾವಳಿ
ಮಂಗಳೂರು, ಅ.11: ಓಲಾ ಮತ್ತು ರಾಪಿಡೋ ಏಪ್ ನಲ್ಲಿ ಟ್ಯಾಕ್ಸಿ ಬುಕ್ ಮಾಡಿಸಿ, ಕರೆ ಮಾಡಿದ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಎಂದು ಹೇಳಿ ನಿಂದನೆ ಮಾಡಿರುವ ಘಟನೆ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.9ರಂದು ರಾತ್ರಿ 10 ರಿಂದ 12 ಗಂಟೆಯ ನಡುವೆ ಘಟನೆ ನಡೆದಿದ್ದು, ಮಲಯಾಳಂ ಸೀರಿಯಲ್ ಮತ್ತು ಸಿನಿಮಾ ನಟರು ಈ ರೀತಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಓಲಾ ಮತ್ತು ರಾಪಿಡೋದಲ್ಲಿ ಟ್ಯಾಕ್ಸಿ ಬುಕ್ ಮಾಡಿ, ಆಬಳಿಕ ಲೊಕೇಶನ್ ಹಾಕಿದ್ದರು. ಎಲ್ಲಿದ್ದೀರಿ ಎಂದು ಚಾಲಕ ಕರೆ ಮಾಡಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿಯನ್ನು ಮುಸ್ಲಿಂ ಎಂದು ತಿಳಿದು ನೀನು ಟೆರರಿಸ್ಟ್, ಮುಸ್ಲಿಂ ತೀವ್ರವಾದಿ ಎಂದು ಹೇಳಿ ನಿಂದನೆ ಮಾಡಿದ್ದಾರೆ. ಇದರ ಆಡಿಯೋವನ್ನು ಚಾಲಕ ರೆಕಾರ್ಡ್ ಮಾಡಿದ್ದು, ಉರ್ವಾ ಠಾಣೆಗೆ ನೀಡಿ ದೂರು ದಾಖಲಿಸಿದ್ದಾರೆ.
ದೂರಿನಂತೆ ವಿಮಲ್, ಸಂತೋಷ್ ಮತ್ತು ಇನ್ನೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಾಲಕನ ಮಾಹಿತಿ ಪ್ರಕಾರ, ಮಲಯಾಳಂ ಸಿನಿಮಾ ನಟರಾದ ಜಯಕೃಷ್ಣನ್ ಮತ್ತು ವಿಮಲ್ ಈ ರೀತಿ ಮಾಡಿದ್ದಾರೆಂದು ಆರೋಪಗಳಿವೆ. ಎಫ್ಐಆರ್ ಪ್ರತಿಯಲ್ಲಿ ಜಯಕೃಷ್ಣನ್ ಹೆಸರಿಲ್ಲ. ಆಬಳಿಕ ಸ್ನೇಹಿತರ ಮೂಲಕ ಇವರಿದ್ದ ಜಾಗವನ್ನು ಟ್ಯಾಕ್ಸಿಯವರು ಪತ್ತೆ ಮಾಡಿದ್ದಾರೆ.
ಈ ವೇಳೆ, ಬಿಜೈ ನ್ಯೂರೋಡ್ ಬಳಿ ಕೇರಳ ನೋಂದಣಿಯ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ಮದ್ಯದ ನಶೆಯಲ್ಲಿ ಇವರು ಓಲಾ ಬುಕ್ ಮಾಡಿದ್ದು ಪತ್ತೆಯಾಗಿದೆ. ಬೇರೆ ಬೇರೆ ಕಡೆ ಲೊಕೇಶನ್ ಹಾಕಿ ದಾರಿ ತಪ್ಪಿಸುವಂತೆ ವರ್ತಿಸಿದ್ದಾರೆ. ಅಲ್ಲದೆ, ಟೆರರಿಸ್ಟ್ ಎಂದು ಹೇಳಿ ನಿಂದಿಸಿದ್ದಾರೆಂದು ದೂರಿನಲ್ಲಿ ಅಹ್ಮದ್ ಶಫೀಕ್ ತಿಳಿಸಿದ್ದಾರೆ.
In #Mangaluru, a case has been filed at Urwa Police Station after an Ola/ #Rapido driver was allegedly abused and called a “Muslim #terrorist” over the phone. The driver claims malayalam TV & film actors were behind the act. 3 have been booked. #Mangaluru #HateCrime #Ola pic.twitter.com/8gt76UCQs9
— Headline Karnataka (@hknewsonline) October 11, 2025
A shocking case of religious abuse has been reported from Mangaluru’s Urwa police limits, where a Malayalam film and serial actor and two others allegedly verbally abused an Ola/ Rapido driver, calling him a “Muslim terrorist.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 05:24 pm
Mangalore Correspondent
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm