ಬ್ರೇಕಿಂಗ್ ನ್ಯೂಸ್
11-10-25 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.11 : ಧರ್ಮಸ್ಥಳ ಸ್ನಾನಘಟ್ಟದ ಬಳಿ ನೂರಾರು ಪೋಸ್ಟ್ ಮಾರ್ಟಂ ಮಾಡಿದ್ದೀನಿ ಎಂದಿರುವ ಎಫ್ಎಸ್ಎಲ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರಿಗೆ ಝೆಡ್ ಪ್ಲಸ್ ಸೆಕ್ಯುರಿಟಿ ಕೊಡಲಿ. ಚಿನ್ನಯ್ಯಗೆ ಕೊಟ್ಟಿದ್ದೀರಿ, ನನಗೆ ಯಾಕೆ ಕೊಟ್ಟಿಲ್ಲ. ನನಗೂ ಮಟ್ಟಣ್ಣನವರ್ ನಿಂದ ಜೀವ ಭಯ ಇದೆ ಎಂದು ಹೇಳಿದ್ದಾರಂತೆ. ನಾನು ಕೂಡ ಪೊಲೀಸರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಮಹಾಬಲ ಶೆಟ್ಟಿ ಹಿಂದೆ ಮುಂದೆ ಎಲ್ಲ ಬ್ಲಾಕ್ ಕ್ಯಾಟ್ ಕಮಾಂಡೋ ಕೊಡಿಸಿ ಎಂದು ಸೌಜನ್ಯಾ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವ್ಯಂಗ್ಯ ಮಾಡಿದ್ದಾರೆ.
ಮಹಾಬಲ ಶೆಟ್ಟಿಯವರು ಮೂರು ಸಾವಿರ ಪೋಸ್ಟ್ ಮಾರ್ಟಂ ಮಾಡಿದ್ದಾರಂತೆ. 32 ಸಾವಿರ ಬೋನ್ ಸರ್ಟಿಫಿಕೇಟ್ ಕೊಟ್ಟಿದ್ದಾರಂತೆ. ದಿನಕ್ಕೊಂದು ಇಂತ ಸರ್ಟಿಫಿಕೇಟ್ ಕೊಟ್ಟರೂ 82 ವರ್ಷ ಬೇಕಾಗುತ್ತದೆ. ಕೇಳಿಸಿಕೊಳ್ತಾರೆ ಅಂತ ವಟ್ರಾಸಿ ಹೇಳಿಬಿಡೋದಾ. ಸಂತೋಷ್ ರಾವ್ ಆರೋಪಿ ಅಂತ ಪ್ರಮಾಣ ಮಾಡ್ತಾರಂತೆ. ಇವರೊಬ್ಬ ವೈದ್ಯಕೀಯ ಎಕ್ಸ್ ಪರ್ಟ್ ಮಾತ್ರ. ವೈಜ್ಞಾನಿಕವಾಗಿ ಏನು ದಾಖಲೆ ಸಿಗುತ್ತೋ ಅದನ್ನು ಪರಿಶೀಲಿಸಿ ರಿಪೋರ್ಟ್ ಕೊಡೋದು ಕೆಲಸ. ಪ್ರಮಾಣ ಮಾಡಲಿಕ್ಕೇನಿದೆ ಇವರಿಗೆ. ಇವರು ಯಾರ ಪರವಾಗಿದ್ದಾರೆ ಅಂತ ಅವರ ಹೇಳಿಕೆಯಲ್ಲೇ ತಿಳಿಯುತ್ತದೆ.
ನಾನು ಕೇಳ್ತಿರೋದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಧರ್ಮಸ್ಥಳದಿಂದ ಬರೀ ಏಳು ಕಿಮೀ ಅಂತರದಲ್ಲಿ ಇರುವಾಗ ಯಾಕೆ 76 ಕಿಮೀ ದೂರದ ಖಾಸಗಿ ಆಸ್ಪತ್ರೆ ಒಯ್ಯಬೇಕಿತ್ತು ಅಂತ. ಇವರು ಇಷ್ಟೆಲ್ಲ ಪೋಸ್ಟ್ ಮಾರ್ಟಂ ಮಾಡಿದ್ದರೆ ಅದರ ಬಿಲ್ ಕೊಟ್ಟಿದ್ದು ಯಾರು ಅಂತ ಕೇಳಿದ್ದೇನೆ. ಅರೆ, ಈ ಪ್ರಶ್ನೆ ಕೇಳಬಾರದಾ.. ಇದನ್ನು ಕೇಳಿದ್ರೆ ನಾನು ಜೀವ ತೆಗೆಯುತ್ತೇನೆ, ಬೆದರಿಕೆ ಹಾಕ್ತೀನಿ ಅಂತಿದಾರೆ. ಪೋಸ್ಟ್ ಮಾರ್ಟಂ ಯಾಕೆ ಪ್ರತಿ ಬಾರಿಯೂ ಅಷ್ಟು ದೂರಕ್ಕೆ ಒಯ್ದು ಮಾಡುತ್ತಿದ್ದರು. ಇವರನ್ನೇ ಯಾಕೆ ಕರೀತಿದ್ರು ಅಂತ ಕೇಳುತ್ತೇನೆ. ಯಾಕೆ ಇವರನ್ನು ಪ್ರಶ್ನೆ ಮಾಡಬಾರದು ಎಂದು ಗಿರೀಶ್ ಮಟ್ಟಣ್ಣನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡೋದು ಯಾಕೆ ಮಹಾಬಲ ಶೆಟ್ಟಿ. ಯಾರನ್ನೋ ಪ್ರಶ್ನೆ ಮಾಡಿದ್ರೆ ಇವರು ಯಾಕೆ ಉತ್ತರಿಸಬೇಕು ಎಂದು ಮಟ್ಟಣ್ಣನವರ್ ಪ್ರಶ್ನಿಸಿದರು. ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಳ್ಳಲು ಯಾರನ್ನೂ ರೇಪ್ ಮಾಡಿ ಹೋಗಿಲ್ಲ. ರೇಪ್ ಮಾಡಿದವರೇ ಓಡಿ ಹೋಗಿಲ್ಲ. ಅಕ್ರಮ ಶಸ್ತ್ರಾಸ್ತ್ರ ಕೇಸಲ್ಲಿ ಜಾಮೀನು ಏನೋ ಸಿಕ್ಕಿಲ್ಲ ಅಷ್ಟೇ. ನಿಜಕ್ಕಾದ್ರೆ ಅದರ ಬಗ್ಗೆ ಕೇಸನ್ನೇ ಮಾಡಬೇಕಿರಲಿಲ್ಲ. ಇವರು ಕೇಸ್ ಮಾಡಿದ್ದಾರೆ ಅಷ್ಟೇ ಎಂದು ಹೇಳಿದರು. ನಾವು ಎಲ್ಲದಕ್ಕೂ ದಾಖಲೆ ತೆಗೆದಿದ್ದೇವೆ, ಅವನ್ನು ಎಲ್ಲಿ ತಲುಪಿಸಬೇಕೋ ಅಲ್ಲಿಗೆ ತಲುಪಿಸಿದ್ದೇವೆ ಎಂದರು.
In Belthangady, activist Girish Mattannavar, known for his outspoken stance in the Soujanya case, took a jibe at forensic expert Dr. Mahabala Shetty, who recently claimed to have conducted hundreds of post-mortems near Dharmasthala.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am