ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm