ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm