ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm