ಬ್ರೇಕಿಂಗ್ ನ್ಯೂಸ್
14-10-25 06:39 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ. ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ ವೇಳೆ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬರಬೇಕಿದೆ.
ಕಳೆದ ವರ್ಷ ಮುದುಂಗಾರುಕಟ್ಟೆಯ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣದಲ್ಲಿ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಾಫ್ ಮಾದಕ ಪದಾರ್ಥಗಳ ವ್ಯಸನಿಯೂ ಆಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
The body of a 28-year-old man accused in a theft case was found at the Mudungarukatte bus stop in Baalepuni village on Monday. The deceased has been identified as Mohammad Niyaf, a resident of Pathuru. Police suspect that drug addiction may have caused his death.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm