ಬ್ರೇಕಿಂಗ್ ನ್ಯೂಸ್
14-10-25 10:13 pm Mangalore Correspondent ಕರಾವಳಿ
ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.
ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm