ಬ್ರೇಕಿಂಗ್ ನ್ಯೂಸ್
14-10-25 10:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.
ಕರಾವಳಿ ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.
ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್ ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
The Karnataka High Court has granted permission to conduct Kambala events in Mysuru, Bengaluru, and Shivamogga, marking a major victory for the state’s traditional buffalo race and the Karnataka Kambala Association. The events had been halted following objections raised by PETA, which alleged cruelty to animals.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm