ಬ್ರೇಕಿಂಗ್ ನ್ಯೂಸ್
14-10-25 10:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.
ಕರಾವಳಿ ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.
ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್ ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
The Karnataka High Court has granted permission to conduct Kambala events in Mysuru, Bengaluru, and Shivamogga, marking a major victory for the state’s traditional buffalo race and the Karnataka Kambala Association. The events had been halted following objections raised by PETA, which alleged cruelty to animals.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm