ಬ್ರೇಕಿಂಗ್ ನ್ಯೂಸ್
15-10-25 05:36 pm Mangalore Correspondent ಕರಾವಳಿ
ಮಂಗಳೂರು, ಅ.14 : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್ವೆಲ್ ಕಡೆಯಿಂದ - ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು. ಫಳ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಆದೇಶಿಸಿದ್ದಾರೆ.
ರಸ್ತೆ ಬಂದ್ ಬಗ್ಗೆ ಜಾಲತಾಣದಲ್ಲಿ ಟೀಕೆ
ಪಂಪ್ವೆಲ್ - ಕಂಕನಾಡಿ ಮಧ್ಯದ 300 ಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟ್ ಮಾಡಲು ಸುದೀರ್ಘ ಏಳು ತಿಂಗಳ ಕಾಲ ರಸ್ತೆ ಬಂದ್ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಮೋರ್ಗನ್ಸ್ ಗೇಟ್ ಬಳಿಯ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಗಿಯದೆ ಪ್ರಯಾಣಿಕರು ಸಂಕಷ್ಟ ಪಡುತ್ತಿದ್ದಾರೆ. ತಲಪಾಡಿ, ತೊಕ್ಕೊಟ್ಟು, ಉಳ್ಳಾಲದಿಂದ ಮಂಗಳೂರು ಬಂದರು ಕಡೆಗೆ ಹೋಗಲು ಜಪ್ಪು ರೈಲ್ವೇ ಅಂಡರ್ ಪಾಸ್ ಹತ್ತಿರದ ಸಂಪರ್ಕ. ಆದರೆ ಆ ರಸ್ತೆಯನ್ನು ಕಳೆದೆರಡು ವರ್ಷದಿಂದ ಕಾಮಗಾರಿ ಸಲುವಾಗಿ ಮುಚ್ಚಲಾಗಿದೆ. ಇದರಿಂದಾಗಿ ಮೀನಿನ ಟೆಂಪೋ, ಈಚರ್ ಮಾದರಿಯ ವಾಹನಗಳು, ಪ್ರಯಾಣಿಕರು ಪಂಪ್ವೆಲ್ ಮೂಲಕ ಸುತ್ತು ಬಳಸಿ ಹೋಗಬೇಕು. ಇದರ ನಡುವೆ ಪಂಪ್ವೆಲ್ ಕಂಕನಾಡಿ ರಸ್ತೆಯನ್ನೂ ಬಂದ್ ಮಾಡಿದರೆ ಹೇಗೆ ಎಂದು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ. ಸಣ್ಣ ರಸ್ತೆಯ ಕಾಮಗಾರಿ ನಡೆಸಲು ದೀರ್ಘ ಏಳು ತಿಂಗಳು ಅಗತ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
Road development work between Pumpwell Circle and Kankanady Bypass in Mangaluru has led to traffic diversions from October 13 to April 15. The stretch will remain partially closed as authorities convert sections into one-way routes for construction. Parking on both sides has also been prohibited.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm