ಬ್ರೇಕಿಂಗ್ ನ್ಯೂಸ್
15-10-25 05:36 pm Mangalore Correspondent ಕರಾವಳಿ
ಮಂಗಳೂರು, ಅ.14 : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್ವೆಲ್ ಕಡೆಯಿಂದ - ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು. ಫಳ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಆದೇಶಿಸಿದ್ದಾರೆ.
ರಸ್ತೆ ಬಂದ್ ಬಗ್ಗೆ ಜಾಲತಾಣದಲ್ಲಿ ಟೀಕೆ
ಪಂಪ್ವೆಲ್ - ಕಂಕನಾಡಿ ಮಧ್ಯದ 300 ಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟ್ ಮಾಡಲು ಸುದೀರ್ಘ ಏಳು ತಿಂಗಳ ಕಾಲ ರಸ್ತೆ ಬಂದ್ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಮೋರ್ಗನ್ಸ್ ಗೇಟ್ ಬಳಿಯ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಗಿಯದೆ ಪ್ರಯಾಣಿಕರು ಸಂಕಷ್ಟ ಪಡುತ್ತಿದ್ದಾರೆ. ತಲಪಾಡಿ, ತೊಕ್ಕೊಟ್ಟು, ಉಳ್ಳಾಲದಿಂದ ಮಂಗಳೂರು ಬಂದರು ಕಡೆಗೆ ಹೋಗಲು ಜಪ್ಪು ರೈಲ್ವೇ ಅಂಡರ್ ಪಾಸ್ ಹತ್ತಿರದ ಸಂಪರ್ಕ. ಆದರೆ ಆ ರಸ್ತೆಯನ್ನು ಕಳೆದೆರಡು ವರ್ಷದಿಂದ ಕಾಮಗಾರಿ ಸಲುವಾಗಿ ಮುಚ್ಚಲಾಗಿದೆ. ಇದರಿಂದಾಗಿ ಮೀನಿನ ಟೆಂಪೋ, ಈಚರ್ ಮಾದರಿಯ ವಾಹನಗಳು, ಪ್ರಯಾಣಿಕರು ಪಂಪ್ವೆಲ್ ಮೂಲಕ ಸುತ್ತು ಬಳಸಿ ಹೋಗಬೇಕು. ಇದರ ನಡುವೆ ಪಂಪ್ವೆಲ್ ಕಂಕನಾಡಿ ರಸ್ತೆಯನ್ನೂ ಬಂದ್ ಮಾಡಿದರೆ ಹೇಗೆ ಎಂದು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ. ಸಣ್ಣ ರಸ್ತೆಯ ಕಾಮಗಾರಿ ನಡೆಸಲು ದೀರ್ಘ ಏಳು ತಿಂಗಳು ಅಗತ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
Road development work between Pumpwell Circle and Kankanady Bypass in Mangaluru has led to traffic diversions from October 13 to April 15. The stretch will remain partially closed as authorities convert sections into one-way routes for construction. Parking on both sides has also been prohibited.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm