ಬ್ರೇಕಿಂಗ್ ನ್ಯೂಸ್
15-10-25 05:36 pm Mangalore Correspondent ಕರಾವಳಿ
ಮಂಗಳೂರು, ಅ.14 : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15ರ ವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ. ಅದೇ ರೀತಿ ಪಂಪ್ವೆಲ್ ಕಡೆಯಿಂದ - ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು. ಫಳ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಆದೇಶಿಸಿದ್ದಾರೆ.
ರಸ್ತೆ ಬಂದ್ ಬಗ್ಗೆ ಜಾಲತಾಣದಲ್ಲಿ ಟೀಕೆ
ಪಂಪ್ವೆಲ್ - ಕಂಕನಾಡಿ ಮಧ್ಯದ 300 ಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟ್ ಮಾಡಲು ಸುದೀರ್ಘ ಏಳು ತಿಂಗಳ ಕಾಲ ರಸ್ತೆ ಬಂದ್ ಮಾಡುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಈಗಾಗಲೇ ಮೋರ್ಗನ್ಸ್ ಗೇಟ್ ಬಳಿಯ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಗಿಯದೆ ಪ್ರಯಾಣಿಕರು ಸಂಕಷ್ಟ ಪಡುತ್ತಿದ್ದಾರೆ. ತಲಪಾಡಿ, ತೊಕ್ಕೊಟ್ಟು, ಉಳ್ಳಾಲದಿಂದ ಮಂಗಳೂರು ಬಂದರು ಕಡೆಗೆ ಹೋಗಲು ಜಪ್ಪು ರೈಲ್ವೇ ಅಂಡರ್ ಪಾಸ್ ಹತ್ತಿರದ ಸಂಪರ್ಕ. ಆದರೆ ಆ ರಸ್ತೆಯನ್ನು ಕಳೆದೆರಡು ವರ್ಷದಿಂದ ಕಾಮಗಾರಿ ಸಲುವಾಗಿ ಮುಚ್ಚಲಾಗಿದೆ. ಇದರಿಂದಾಗಿ ಮೀನಿನ ಟೆಂಪೋ, ಈಚರ್ ಮಾದರಿಯ ವಾಹನಗಳು, ಪ್ರಯಾಣಿಕರು ಪಂಪ್ವೆಲ್ ಮೂಲಕ ಸುತ್ತು ಬಳಸಿ ಹೋಗಬೇಕು. ಇದರ ನಡುವೆ ಪಂಪ್ವೆಲ್ ಕಂಕನಾಡಿ ರಸ್ತೆಯನ್ನೂ ಬಂದ್ ಮಾಡಿದರೆ ಹೇಗೆ ಎಂದು ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ. ಸಣ್ಣ ರಸ್ತೆಯ ಕಾಮಗಾರಿ ನಡೆಸಲು ದೀರ್ಘ ಏಳು ತಿಂಗಳು ಅಗತ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
Road development work between Pumpwell Circle and Kankanady Bypass in Mangaluru has led to traffic diversions from October 13 to April 15. The stretch will remain partially closed as authorities convert sections into one-way routes for construction. Parking on both sides has also been prohibited.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm