ಬ್ರೇಕಿಂಗ್ ನ್ಯೂಸ್
16-10-25 01:11 pm Mangalore Correspondent ಕರಾವಳಿ
ಮಂಗಳೂರು, ಅ.16 : ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, 'ರಸರಾಗ ಚಕ್ರವರ್ತಿ' ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಇನ್ನಿಲ್ಲ. ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು.
ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿದ್ದ ದಿನೇಶ್ ಅಮ್ಮಣ್ಣಾಯರು ಪೌರಾಣಿಕ ಮತ್ತು ತುಳು ಸಾಮಾಜಿಕ ಪ್ರಸಂಗಗಳಲ್ಲಿ ತಮ್ಮದೇ ಛಾಪು ಮೂಡಿಸಿ, ಅಮ್ಮಣ್ಣಾಯ ಶೈಲಿಯನ್ನು ಹುಟ್ಟುಹಾಕಿದ್ದರು. ತೆಂಕುತಿಟ್ಟು ಯಕ್ಷಗಾನ ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚ ಅವರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ವೃತ್ತಿ ಜೀವನ ಆರಂಭಿಸಿದ್ದು ವಿಶೇಷ. ಬಳಿಕ ತನ್ನ ಕಂಚಿನ ಕಂಠದಿಂದಾಗಿ ದಾಮೋದರ ಮಂಡೆಚ್ಚ ಅವರ ತರಬೇತಿಯಲ್ಲಿ ಭಾಗವತಿಕೆಯತ್ತ ಹೊರಳಿದ್ದರು. 90ರ ದಶಕದಲ್ಲಿ ತುಳು ಯಕ್ಷಗಾನದಲ್ಲಿ ಅಮ್ಮಣ್ಣಾಯರ ಭಾಗವತಿಕೆ ಜನಮನ ಸೆಳೆದು ಚಿರಸ್ಥಾಯಿ ಎಂಬಂತಾಗಿತ್ತು.
ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯದ ನಿವಾಸಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕರ್ನಾಟಕ ಮೇಳ, ಎಡನೀರು ಮೇಳ, ಕದ್ರಿ ಮೇಳ ಹೀಗೆ ಹಲವಾರು ತೆಂಕುತಿಟ್ಟಿನ ಮೇಳಗಳಲ್ಲಿ ಭಾಗವತರಾಗಿ ಜನಪ್ರಿಯರಾಗಿದ್ದ ಅವರು ಭಾವಪ್ರಧಾನ ಪ್ರಸಂಗಗಳ ಗಾಯನಕ್ಕೆ ಹೆಸರುವಾಸಿಯಾಗಿದ್ದರು. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
Famed Thenkuthittu Yakshagana Bhagavatha and celebrated vocalist Dinesh Ammannaya (68) passed away on Thursday morning at his daughter’s residence in Kanyadi, Belthangady taluk. Known for his golden voice and unique ragas, Ammannaya carved a distinct identity in Tulu Yakshagana, developing what became known as the “Ammannaya style.” Trained under the legendary Damodara Mandecha, he began his career as a percussionist before becoming one of the most admired Bhagavathas across Karnataka, Edaniru, and Kadri troupes.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm