ಬ್ರೇಕಿಂಗ್ ನ್ಯೂಸ್
16-10-25 01:11 pm Mangalore Correspondent ಕರಾವಳಿ
ಮಂಗಳೂರು, ಅ.16 : ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, 'ರಸರಾಗ ಚಕ್ರವರ್ತಿ' ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಇನ್ನಿಲ್ಲ. ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು.
ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿದ್ದ ದಿನೇಶ್ ಅಮ್ಮಣ್ಣಾಯರು ಪೌರಾಣಿಕ ಮತ್ತು ತುಳು ಸಾಮಾಜಿಕ ಪ್ರಸಂಗಗಳಲ್ಲಿ ತಮ್ಮದೇ ಛಾಪು ಮೂಡಿಸಿ, ಅಮ್ಮಣ್ಣಾಯ ಶೈಲಿಯನ್ನು ಹುಟ್ಟುಹಾಕಿದ್ದರು. ತೆಂಕುತಿಟ್ಟು ಯಕ್ಷಗಾನ ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚ ಅವರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ವೃತ್ತಿ ಜೀವನ ಆರಂಭಿಸಿದ್ದು ವಿಶೇಷ. ಬಳಿಕ ತನ್ನ ಕಂಚಿನ ಕಂಠದಿಂದಾಗಿ ದಾಮೋದರ ಮಂಡೆಚ್ಚ ಅವರ ತರಬೇತಿಯಲ್ಲಿ ಭಾಗವತಿಕೆಯತ್ತ ಹೊರಳಿದ್ದರು. 90ರ ದಶಕದಲ್ಲಿ ತುಳು ಯಕ್ಷಗಾನದಲ್ಲಿ ಅಮ್ಮಣ್ಣಾಯರ ಭಾಗವತಿಕೆ ಜನಮನ ಸೆಳೆದು ಚಿರಸ್ಥಾಯಿ ಎಂಬಂತಾಗಿತ್ತು.
ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯದ ನಿವಾಸಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕರ್ನಾಟಕ ಮೇಳ, ಎಡನೀರು ಮೇಳ, ಕದ್ರಿ ಮೇಳ ಹೀಗೆ ಹಲವಾರು ತೆಂಕುತಿಟ್ಟಿನ ಮೇಳಗಳಲ್ಲಿ ಭಾಗವತರಾಗಿ ಜನಪ್ರಿಯರಾಗಿದ್ದ ಅವರು ಭಾವಪ್ರಧಾನ ಪ್ರಸಂಗಗಳ ಗಾಯನಕ್ಕೆ ಹೆಸರುವಾಸಿಯಾಗಿದ್ದರು. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
Famed Thenkuthittu Yakshagana Bhagavatha and celebrated vocalist Dinesh Ammannaya (68) passed away on Thursday morning at his daughter’s residence in Kanyadi, Belthangady taluk. Known for his golden voice and unique ragas, Ammannaya carved a distinct identity in Tulu Yakshagana, developing what became known as the “Ammannaya style.” Trained under the legendary Damodara Mandecha, he began his career as a percussionist before becoming one of the most admired Bhagavathas across Karnataka, Edaniru, and Kadri troupes.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm