ಬ್ರೇಕಿಂಗ್ ನ್ಯೂಸ್
16-10-25 10:37 pm Mangalore Correspondent ಕರಾವಳಿ
ಮಂಗಳೂರು, ಅ.16 : 1971ರ ಭಾರತ - ಪಾಕ್ ಯುದ್ಧದಲ್ಲಿ ಭಾಗವಹಿಸಿದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಮೃತರ ದೇಹವನ್ನು ಅವರ ಇಚ್ಛೆಯಂತೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಪುತ್ರ ಮೃತರಾಗಿದ್ದು ಪತ್ನಿ, ಒಬ್ಬರು ಮಗಳು ಆಯುರ್ವೇದಿಕ್ ವೈದ್ಯರಾಗಿದ್ದು ಮತ್ತು ಮೊಮ್ಮಕ್ಕಳು ಇದ್ದಾರೆ. ಜಿಟಿ ಆಳ್ವರು ಭೂಸೇನೆಯಲ್ಲಿ ಸೇವೆ ನಿರ್ವಹಿಸಿದ್ದು 1971ರ ಯುದ್ಧದಲ್ಲಿ ತೀವ್ರ ಗಾಯಗೊಂಡು ಚೇತರಿಕೆ ಕಂಡ ಬಳಿಕವೂ ಹತ್ತು ವರ್ಷ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. 1982ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತರಾಗಿ ಬಳಿಕ ಮಂಗಳೂರಿಗೆ ಬಂದು ಫುಡ್ ಇನ್ಸ್ ಪೆಕ್ಟರ್ ಆಗಿದ್ದರು. ಬೆಳ್ತಂಗಡಿ, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ 2000ನೇ ಇಸವಿಯಲ್ಲಿ ನಿವೃತ್ತರಾಗಿದ್ದರು.
ಇತ್ತೀಚೆಗೆ ಅವರ ಅನುಭವ ಕಥನ 'ಗರೋಡಿ ಮನೆಯಿಂದ ಸೇನಾ ಗರಡಿಗೆ' ಪ್ರಕಟವಾಗಿತ್ತು. ತುಳುನಾಡಿನ ಸಾಮಾನ್ಯ ಕೃಷಿ ಕುಟುಂಬ ಒಂದರಲ್ಲಿ ಜನಿಸಿದ ಯುವಕ ದೇಶ ಕಾಯುವ ಸೈನಿಕನಾಗಿದ್ದಲ್ಲದೆ, 1971ರ ಪಾಕಿಸ್ತಾನ ಜೊತೆಗಿನ ಯುದ್ಧದಲ್ಲಿ ಪಾಲ್ಗೊಂಡು ಜೀವನ್ಮರಣ ಸ್ಥಿತಿಗೆ ಒಳಗಾಗಿದ್ದರು. ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದಿದ್ದರು. ಇವೆಲ್ಲದರ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.
1971ರ ಭಾರತ -ಪಾಕ್ ಯುದ್ಧದಲ್ಲಿ ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತ್ತು. ದೇಶದ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣೆಕ್ ಶಾ ರೂಪಿಸಿದ ಯುದ್ಧ ತಂತ್ರ ಬೆರಗಿನದ್ದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ.ಟಿ ಆಳ್ವ ಅವರದ್ದು. ಡೆಹ್ರಾಡೂನ್, ನಾಗಾಲ್ಯಾಂಡ್, ಉತ್ತರ ಪ್ರದೇಶ, ಅಸ್ಸಾಂ ಇನ್ನಿತರ ಕಡೆಗಳಲ್ಲಿ ಅವರು ಸೇವೆಗೈದಿದ್ದರು.
Former Indian Army soldier Garodi Thimmappa Alva (85), a veteran of the 1971 India–Pakistan war, passed away on Thursday evening at his residence in Lohit Nagar near Kuntikana, Mangaluru. A native of a farming family, Alva served in the Army for over a decade and miraculously survived after falling from a helicopter during enemy shelling in the Chittagong region.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am