ಬ್ರೇಕಿಂಗ್ ನ್ಯೂಸ್
21-10-25 09:49 pm Mangalore Correspondent ಕರಾವಳಿ
ಮಂಗಳೂರು, ಅ.21 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಪುತ್ತೂರಿಗೆ ನಿನ್ನೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿರುವ ಜಿಎಸ್ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಕ್ಯಾ. ಚೌಟ ತೀವ್ರವಾಗಿ ಖಂಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಹತಾಶೆಯ ಹೇಳಿಕೆ "ಕೈಲಾಗದವನು ಮೈ ಪರಚಿಕೊಂಡ" ಎನ್ನುವಂತಿದೆ. ಅವರ ₹15,000 ಕೋಟಿ ಕರ್ನಾಟಕಕ್ಕೆ ನಷ್ಟ ಎಂಬ ಹೇಳಿಕೆಗೆ ಯಾವುದೇ ಆಧಾರವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇ ಪದೇ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಮೋದಿ ಸರ್ಕಾರವು ಜಿಎಸ್ಟಿ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವುದರಿಂದ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಲಾಭವುಂಟು ಮಾಡಿದೆ. ಆದರೆ, ಯಾವುದೇ ಅಂಕಿ-ಅಂಶ ಅಥವಾ ದಾಖಲೆಯಿಲ್ಲದೆ ಸಿದ್ದರಾಮಯ್ಯನವರು ಸಾರ್ವಜನಿಕ ವೇದಿಕೆಯಲ್ಲಿ ನಿಂತು ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಮೋದಿಯವರು ಜಿಎಸ್ಟಿ ತಂದು ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಗದ್ದಲ ಎಬ್ಬಿಸುತ್ತಿದ್ದ ಕಾಂಗ್ರೆಸ್ಸಿಗರು, ಈಗ ಜಿಎಸ್ಟಿ ಕಡಿಮೆ ಮಾಡಿರುವುದರಿಂದ ತಮ್ಮ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯನವರು ಈಗ ಕೇವಲ ರಾಜಕೀಯವಾಗಿ ಟೀಕಿಸಬೇಕೆಂಬ ಕಾರಣಕ್ಕಾಗಿ ಜಿಎಸ್ಟಿ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸ್ಪಷ್ಟ. ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಆರ್ಥಿಕ ವೈಫಲ್ಯ, ಭ್ರಷ್ಟ ಆಡಳಿತ ಮತ್ತು ದುಂದು ವೆಚ್ಚಗಳಿಗೆ ಕೇಂದ್ರದ ಮೇಲೆ ದೂಷಣೆ ಮಾಡುವುದನ್ನೇ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಜೆಂಡಾ ಮಾಡಿಕೊಂಡಿದ್ದಾರೆ. ಅಸಂಬದ್ಧ ಗ್ಯಾರಂಟಿ ಯೋಜನೆ, ಮುಡಾ ಹಗರಣ, ವಾಲ್ಮೀಕಿ ಹಗರಣ ಹೀಗೆ ಸಿದ್ದರಾಮಯ್ಯನವರ ದುರಾಡಳಿತಕ್ಕೆ ದೊಡ್ಡ ಪಟ್ಟಿಯೇ ಇದೆ. ಇದನ್ನೆಲ್ಲ ಮುಚ್ಚಿ ಹಾಕುವುದಕ್ಕೆ ಇಡೀ ದೇಶವೇ ಸ್ವಾಗತಿಸಿರುವ ಜಿಎಸ್ಟಿ ಸುಧಾರಣೆಗಳ ಬಗ್ಗೆ ಈ ರೀತಿ ಬೇಜವಾಬ್ದಾರಿಯಿಂದ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.
Dakshina Kannada MP Brijesh Chowta criticized Karnataka Chief Minister Siddaramaiah for his remarks against Prime Minister Narendra Modi’s GST rate reduction, calling them baseless and politically motivated.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm