ಬ್ರೇಕಿಂಗ್ ನ್ಯೂಸ್
22-10-25 09:55 pm Mangalore Correspondent ಕರಾವಳಿ
ಪುತ್ತೂರು, ಅ.22 : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಸಾಗಾಟದ ಲಾರಿಗೆ ತಡೆಯೊಡ್ಡಿದ ಪ್ರಕರಣದಲ್ಲಿ ಹಿಂದು ಪರ ಮುಖಂಡ ಅರುಣ್ ಪುತ್ತಿಲ ಅವರು ತಲವಾರು ಹಿಡಿದು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆದಿದೆ. ಈ ಬಗ್ಗೆ ಎಸ್ಪಿ ಅರುಣ್ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರುಗಳಲ್ಲಿ ಹಿಂಸಾತ್ಮಕ ರೀತಿ ಕಟ್ಟಿದ್ದರಿಂದ ಒಂದು ಜಾನುವಾರು ಸತ್ತಿತ್ತು. ಈ ವೇಳೆ, ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಗೋವು ಸತ್ತಿದ್ದನ್ನು ಗಮನಿಸಿ ಪೊಲೀಸರ ಅನುಮತಿ ಪಡೆದು ತುರ್ತಾಗಿ ಎತ್ತುಗಳನ್ನು ವಾಹನದಿಂದ ಇಳಿಸಲು ಮುಂದಾಗಿದ್ದಾರೆ. ಜಾನುವಾರಗಳು ಇನ್ನಷ್ಟು ಸಾವಾಗುವುದನ್ನು ತಪ್ಪಿಸಲು ಪೊಲೀಸರ ಜೊತೆಗೆ ವಾಹನವನ್ನು ಹೊರಭಾಗದಿಂದ ಕಟ್ಟಿದ್ದ ಹಗ್ಗವನ್ನು ಕತ್ತಿಯಲ್ಲಿ ಕಡಿದು ಹಾಕಿದ್ದಾರೆ. ಹತ್ತಿರದ ಮನೆಯಿಂದ ಕತ್ತಿಯನ್ನು ತರಿಸಿಕೊಂಡು ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿರುವುದಾಗಿದೆ.




ಆದರೆ ಅರುಣ್ಕುಮಾರ್ ಪುತ್ತಿಲ ಕೈಯಲ್ಲಿದ್ದ ಕತ್ತಿಯನ್ನು ಸಮೀಪದ ಮನೆಯೊಂದರಿಂದ ತರಲಾಗಿತ್ತು. ಘಟನೆ ನಡೆದ ಸ್ಥಳದ ಎದುರಿನ ಮುಸ್ಲಿಂ ಕುಟುಂಬದ ಮನೆಯಿಂದ ಆ ಕತ್ತಿಯನ್ನು ತರಲಾಗಿದ್ದು, ಜಾನುವಾರುಗಳನ್ನು ರಕ್ಷಿಸಲು ಸಹಾಯವಾಗಲೆಂದು ಅವರು ತಮ್ಮ ಮನೆಯಿಂದ ಕತ್ತಿಯನ್ನು ನೀಡಿದ್ದರು.
ಪೊಲೀಸರು ಇಂತಹ ಸಂದರ್ಭಗಳಲ್ಲಿ ಕೆಲವೊಮ್ಮೆ ಸ್ಥಳೀಯರು ಮತ್ತು ಇತರರ ಸಹಾಯವನ್ನು ಪಡೆಯುತ್ತಾರೆ. ಉದಾಹರಣೆಗೆ ರೋಗಿಗಳನ್ನು ಸ್ಥಳಾಂತರಿಸುವುದು, ಶವಗಳನ್ನು ಸಾಗಿಸುವುದು, ರಸ್ತೆಗಳಿಂದ ವಾಹನಗಳನ್ನು ತೆರವುಗೊಳಿಸುವುದು, ಎತ್ತುಗಳನ್ನು ಇಳಿಸುವುದು ಇತ್ಯಾದಿ. ಯಾರು ಅನಧಿಕೃತ ಕೃತ್ಯ ಮಾಡುತ್ತಾರೋ, ಅವರನ್ನು ಕೇವಲ ಅಪರಾಧಿಗಳೆಂದು ಪರಿಗಣಿಸಬೇಕು. ಈವರೆಗೆ ದಾಖಲಾಗಿರುವ ಪ್ರಕರಣಗಳ ವಿಶ್ಲೇಷಣೆಯಿಂದ ನೋಡಿದರೆ, ಜಾನುವಾರು ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ವಿವಿಧ ಧರ್ಮದವರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.
ಆದ್ದರಿಂದ, ಯಾವುದೇ ಸಂಸ್ಥೆ ಅಥವಾ ಸಂಘಟನೆಯು ಆರೋಪಿಯು ಬೇರೆ ಧರ್ಮದವರಾದ್ದರಿಂದ ಮಾತ್ರ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದರೆ, ಅಥವಾ ತಮ್ಮ ಧರ್ಮದವರಾದ್ದರಿಂದ ಅದನ್ನು ಮುಚ್ಚಿಡುತ್ತಿದ್ದರೆ, ಜನರು ಅವರ ಉದ್ದೇಶಗಳನ್ನು ಪ್ರಶ್ನಿಸಬೇಕು. ಅವರ ಅಜೆಂಡಾಕ್ಕೆ ಬೆಂಬಲ ನೀಡಬಾರದು ಎಂದು ವಿನಂತಿಸಲಾಗಿದೆ. ಈ ಸಂಬಂಧ ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
Dakshina Kannada SP Arun has issued a clarification regarding rumours that Hindu leader Arun Puthila carried a sword during a police operation to stop illegal cattle transport in Puttur.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm