ಬ್ರೇಕಿಂಗ್ ನ್ಯೂಸ್
23-10-25 07:35 pm Mangalore Correspondent ಕರಾವಳಿ
ಮಂಗಳೂರು, ಅ.23 : ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ "ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025" ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27 ರಂದು ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಏರ್ಪಡಿಸಬೇಕು. ಜಿಲ್ಲೆಯ ಕ್ರೀಡಾ ಮೂಲ ಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು. ಕ್ರೀಡಾಕೂಟದಲ್ಲಿ 14 ದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಿಗೆ ಕ್ರೀಡಾ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ಕ್ರೀಡಾಂಗಣದ ಒಳಗೆ ಎಲ್ಲಾ ತಾಂತ್ರಿಕ ಅಂಶಗಳನ್ನು ಅಚ್ಚುಕಟ್ಟುಗೊಳಿಸಬೇಕು. ಕ್ರೀಡಾಪಟುಗಳು ಮತ್ತು ತೀರ್ಪುಗಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಕ್ರೀಡಾಕೂಟಕ್ಕೆ ಬರುವ ವಾಹನಗಳಿಗೆ ಉರ್ವಾ ಮಾರ್ಕೆಟ್ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣಕ್ಕೆ ಹೋಗಿ ಬರುವ ರಸ್ತೆ ಲೇಡಿಹಿಲ್ನಿಂದ ಉರ್ವಾ ಮಾರ್ಕೆಟ್ ವರೆಗೆ ಸೌಂದರ್ಯೀಕರಣಗೊಳಿಸಬೇಕು. ತ್ಯಾಜ್ಯ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಸೂಚಿಸಿದರು.
ಕ್ರೀಡಾಕೂಟದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ಧಗೊಳಿಸಬೇಕು. ಕ್ರೀಡಾಪಟುಗಳು ಪ್ರವಾಸಿ ತಾಣಗಳಿಗೆ ಹೋಗಲಿಚ್ಛಿಸಿದ್ದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು. ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆರೋಗ್ಯ ಕೇಂದ್ರವನ್ನು ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಬೇಕು. ಕ್ರೀಡಾ ವೈದ್ಯಕೀಯ ತಜ್ಞರನ್ನು ನಿಯೋಜಿಸುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್, ಸ್ಮಾರ್ಟ್ ಸಿಟಿ ಎಂ.ಡಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
For the first time, Mangaluru will host an international-level badminton tournament, titled “Mangalore India International Challenge 2025.” The prestigious event will be inaugurated by Chief Minister Siddaramaiah on October 27 at the Urwa Indoor Stadium.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm