ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm