ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm