ಬ್ರೇಕಿಂಗ್ ನ್ಯೂಸ್
25-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.25: ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪದ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಒಂದೆಡೆ ರಾಜ್ಯ ಸರ್ಕಾರ ಇದೇ ತಿಂಗಳ ಒಳಗಡೆ ತನಿಖೆ ಮುಗಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸೌಜನ್ಯಾ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಲ್ವರಿಗೆ ಎಸ್ಐಟಿ ವಿಚಾರಣೆಗೆ ಕರೆದಿದ್ದು, ತಪ್ಪಿದಲ್ಲಿ ಬಂಧನ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಅ.27ರಂದು ಬೆಳಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ವಿಚಾರಣೆ ಎದುರಿಸಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ ಗೌಡ ಅವರಿಗೆ ನೋಟಿಸ್ ನೀಡಲಾಗಿದೆ. ಅ.24ರಂದು ಈ ನೋಟಿಸ್ ಜಾರಿಯಾಗಿದ್ದು, ನಾಲ್ವರಿಗೂ ಏಕಕಾಲದಲ್ಲಿ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.
ನೋಟೀಸಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮುಂದೆ ಯಾವತ್ತೂ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು, ಪೊಲೀಸರಿಗೆ ಹೇಳಿಕೆ ನೀಡದಂತೆ ಯಾರಿಗೂ ಒತ್ತಡ ಹೇರಬಾರದು, ಸಾಕ್ಷ್ಯ ನಾಶ ಮಾಡಬಾರದು ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಈಗಾಗಲೇ ಮಹೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣನವರ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅದರ ವಿಚಾರಣೆಯೂ ಬಾಕಿ ಇದೆ. ಎಸ್ಐಟಿ ತನಿಖೆ ನಿಟ್ಟಿನಲ್ಲಿ ಈ ಹಿಂದೆಯೂ ನೋಟೀಸ್ ಜಾರಿ ಮಾಡಲಾಗಿತ್ತು. ಮಹೇಶ್ ಶೆಟ್ಟಿ ಬಿಟ್ಟು ಇತರರು ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದು ಹೇಳಿಕೆಯನ್ನೂ ನೀಡಿದ್ದರು.
ಇದೀಗ ಎಸ್ಐಟಿ ಮುಂದಿನ ವಾರ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದೆ ಎನ್ನಲಾಗುತ್ತಿದ್ದು, ಇದರ ನಡುವೆಯೇ ಪಿತೂರಿ ಆರೋಪಕ್ಕೀಡಾದ ನಾಲ್ವರಿಗೆ ತನಿಖೆ ಸಲುವಾಗಿ ನೋಟಿಸ್ ಜಾರಿ ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರಿಗೆ ಗಡೀಪಾರು ಮಾಡಲು ಸಿದ್ಧತೆ ನಡೆದಿದ್ದರೂ ಹೈಕೋರ್ಟ್ ತಡೆ ನೀಡಿರುವುದರಿಂದ ಸದ್ಯಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಎಸ್ಐಟಿ ನೋಟೀಸ್ ನೀಡಿರುವುದು ಮತ್ತು ಅದರ ಜೊತೆಗೆ ತನಿಖೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ. ಇದೇ ವೇಳೆ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಬಂದಿದ್ದು, ತನಿಖಾ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
The Dharmasthala buried-body case has reached a crucial stage, with the Special Investigation Team (SIT) nearing completion of its inquiry as per state government directives to submit the final report this month.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm