ಬ್ರೇಕಿಂಗ್ ನ್ಯೂಸ್
25-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.25: ಧರ್ಮಸ್ಥಳದಲ್ಲಿ ಹೆಣ ಹೂತ ಆರೋಪದ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಒಂದೆಡೆ ರಾಜ್ಯ ಸರ್ಕಾರ ಇದೇ ತಿಂಗಳ ಒಳಗಡೆ ತನಿಖೆ ಮುಗಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸೌಜನ್ಯಾ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಲ್ವರಿಗೆ ಎಸ್ಐಟಿ ವಿಚಾರಣೆಗೆ ಕರೆದಿದ್ದು, ತಪ್ಪಿದಲ್ಲಿ ಬಂಧನ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಅ.27ರಂದು ಬೆಳಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ವಿಚಾರಣೆ ಎದುರಿಸಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ ಗೌಡ ಅವರಿಗೆ ನೋಟಿಸ್ ನೀಡಲಾಗಿದೆ. ಅ.24ರಂದು ಈ ನೋಟಿಸ್ ಜಾರಿಯಾಗಿದ್ದು, ನಾಲ್ವರಿಗೂ ಏಕಕಾಲದಲ್ಲಿ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.
ನೋಟೀಸಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮುಂದೆ ಯಾವತ್ತೂ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು, ಪೊಲೀಸರಿಗೆ ಹೇಳಿಕೆ ನೀಡದಂತೆ ಯಾರಿಗೂ ಒತ್ತಡ ಹೇರಬಾರದು, ಸಾಕ್ಷ್ಯ ನಾಶ ಮಾಡಬಾರದು ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಈಗಾಗಲೇ ಮಹೇಶ್ ಶೆಟ್ಟಿ ಮತ್ತು ಗಿರೀಶ್ ಮಟ್ಟಣ್ಣನವರ್ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅದರ ವಿಚಾರಣೆಯೂ ಬಾಕಿ ಇದೆ. ಎಸ್ಐಟಿ ತನಿಖೆ ನಿಟ್ಟಿನಲ್ಲಿ ಈ ಹಿಂದೆಯೂ ನೋಟೀಸ್ ಜಾರಿ ಮಾಡಲಾಗಿತ್ತು. ಮಹೇಶ್ ಶೆಟ್ಟಿ ಬಿಟ್ಟು ಇತರರು ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದು ಹೇಳಿಕೆಯನ್ನೂ ನೀಡಿದ್ದರು.
ಇದೀಗ ಎಸ್ಐಟಿ ಮುಂದಿನ ವಾರ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದೆ ಎನ್ನಲಾಗುತ್ತಿದ್ದು, ಇದರ ನಡುವೆಯೇ ಪಿತೂರಿ ಆರೋಪಕ್ಕೀಡಾದ ನಾಲ್ವರಿಗೆ ತನಿಖೆ ಸಲುವಾಗಿ ನೋಟಿಸ್ ಜಾರಿ ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರಿಗೆ ಗಡೀಪಾರು ಮಾಡಲು ಸಿದ್ಧತೆ ನಡೆದಿದ್ದರೂ ಹೈಕೋರ್ಟ್ ತಡೆ ನೀಡಿರುವುದರಿಂದ ಸದ್ಯಕ್ಕೆ ಸಾಧ್ಯವಾಗಿಲ್ಲ. ಹೀಗಾಗಿ ಎಸ್ಐಟಿ ನೋಟೀಸ್ ನೀಡಿರುವುದು ಮತ್ತು ಅದರ ಜೊತೆಗೆ ತನಿಖೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ. ಇದೇ ವೇಳೆ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಬಂದಿದ್ದು, ತನಿಖಾ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
The Dharmasthala buried-body case has reached a crucial stage, with the Special Investigation Team (SIT) nearing completion of its inquiry as per state government directives to submit the final report this month.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm