ಬ್ರೇಕಿಂಗ್ ನ್ಯೂಸ್
26-10-25 04:42 pm Mangalore Correspondent ಕರಾವಳಿ
ಮಂಗಳೂರು, ಅ.26 : 11 ದಿನಗಳಿಂದ ಅರಬ್ಬೀ ಸಮುದ್ರ ಮಧ್ಯೆ ನಾಪತ್ತೆಯಾಗಿದ್ದ ಗೋವಾ ಮೂಲದ 31 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಒಂದನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ಪತ್ತೆಹಚ್ಚಿದ್ದು, ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊನ್ನಾವರ ಬಂದರಿಗೆ ಕರೆತಂದಿದೆ.
ಮಂಗಳೂರು ಬಂದರಿನಿಂದ ನೂರು ನಾಟಿಕಲ್ ಮೈಲು ದೂರದಲ್ಲಿ ಗೋವಾ ಮೂಲದ ಬೋಟ್ ನಾಪತ್ತೆಯಾಗಿದ್ದಾಗಿ ಅ.24ರಂದು ಮಂಗಳೂರಿನ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಮಾಹಿತಿ ಬಂದಿತ್ತು. ಇದರಂತೆ, ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು ಕೊನೆಯ ಬಾರಿಗೆ ಮಿಸ್ಸಿಂಗ್ ಆಗಿದೆ ಎನ್ನಲಾದ ಜಾಗಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದರೆ ಅಲ್ಲಿ ಬೋಟ್ ಪತ್ತೆಯಾಗದ ಕಾರಣ ಹೆಲಿಕಾಪ್ಟರ್ ಸಹಾಯ ಕೇಳಲಾಗಿತ್ತು.




ಆನಂತರ, ಕೊಚ್ಚಿಯಿಂದ ಬಂದಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರ ಮೇಲ್ಭಾಗದಿಂದ ಹಾರಾಡುತ್ತಾ ಮೀನುಗಾರಿಕಾ ಬೋಟಿನ ಬಗ್ಗೆ ಶೋಧ ನಡೆಸಿತ್ತು. ಮಳೆಯಿಂದಾಗಿ ವಾತಾವರಣ ಹದಗೆಟ್ಟಿದ್ದರೂ ಹಡಗಿನ ಜೊತೆ ಸೇರಿ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸಿದೆ. ಅ.25ರಂದು ಡೋರ್ನಿಯರ್ ಏರ್ ಕ್ರಾಫ್ಟ್ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟನ್ನು ಸಮುದ್ರ ನಡುವೆ ಪತ್ತೆಹಚ್ಚಿದ್ದು ಕೂಡಲೇ ಕೋಸ್ಟ್ ಗಾರ್ಡ್ ಹಡಗಿಗೆ ಮಾಹಿತಿ ರವಾನಿಸಿತ್ತು.
ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗು ಕೂಡಲೇ ಆ ಸ್ಥಳಕ್ಕೆ ಧಾವಿಸಿದ್ದು ಬೋಟಿನಲ್ಲಿದ್ದ ಎಲ್ಲ ಮೀನುಗಾರರನ್ನು ರಕ್ಷಣೆ ಮಾಡಿದ್ದಲ್ಲದೆ, ಅವರಿಗೆ ಆಹಾರ ನೀರು ಪೂರೈಸಿ ಅಪಾಯದಿಂದ ಪಾರು ಮಾಡಿದೆ. ಸಂತ ಏಂಟನಿ ಹೆಸರಿನ ಗೋವಾ ಮೂಲದ ಮೀನುಗಾರಿಕಾ ಬೋಟನ್ನು ಬಳಿಕ ಹಗ್ಗ ಕಟ್ಟಿ ಹೊನ್ನಾವರ ಬಂದರಿಗೆ ಎಳೆದು ತರಲಾಯಿತು. ಅದರಲ್ಲಿದ್ದ ಎಲ್ಲ 31 ಮೀನುಗಾರರನ್ನೂ ರಕ್ಷಣೆ ಮಾಡಲಾಗಿದೆ.
ಹವಾವಾನ ವೈಪರೀತ್ಯದ ನಡುವೆಯೂ ಕೋಸ್ಟ್ ಗಾರ್ಡ್ ಪಡೆಯು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಯಶಸ್ವೀ ಕಾರ್ಯಾಚರಣೆ ನಡೆಸಿದ್ದು ಸಮುದ್ರ ಮಧ್ಯೆ ಸಾವಿನ ದವಡೆಯಲ್ಲಿ ಸಿಕ್ಕಿಬಿದ್ದು ಒದ್ದಾಡಿದ್ದ ಮೀನುಗಾರರನ್ನು ರಕ್ಷಿಸಿ ಕರೆತಂದಿದೆ. ಮೀನುಗಾರಿಕಾ ಬೋಟಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಗಾಳಿ, ಮಳೆಯ ನಡುವೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿತ್ತು.
The Indian Coast Guard successfully rescued 31 fishermen from a Goa-based fishing boat that had been missing in the Arabian Sea for 11 days. After receiving information on October 24 that the vessel was lost about 100
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm