ಬ್ರೇಕಿಂಗ್ ನ್ಯೂಸ್
26-10-25 04:42 pm Mangalore Correspondent ಕರಾವಳಿ
ಮಂಗಳೂರು, ಅ.26 : 11 ದಿನಗಳಿಂದ ಅರಬ್ಬೀ ಸಮುದ್ರ ಮಧ್ಯೆ ನಾಪತ್ತೆಯಾಗಿದ್ದ ಗೋವಾ ಮೂಲದ 31 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಒಂದನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ಪತ್ತೆಹಚ್ಚಿದ್ದು, ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊನ್ನಾವರ ಬಂದರಿಗೆ ಕರೆತಂದಿದೆ.
ಮಂಗಳೂರು ಬಂದರಿನಿಂದ ನೂರು ನಾಟಿಕಲ್ ಮೈಲು ದೂರದಲ್ಲಿ ಗೋವಾ ಮೂಲದ ಬೋಟ್ ನಾಪತ್ತೆಯಾಗಿದ್ದಾಗಿ ಅ.24ರಂದು ಮಂಗಳೂರಿನ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಮಾಹಿತಿ ಬಂದಿತ್ತು. ಇದರಂತೆ, ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು ಕೊನೆಯ ಬಾರಿಗೆ ಮಿಸ್ಸಿಂಗ್ ಆಗಿದೆ ಎನ್ನಲಾದ ಜಾಗಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದರೆ ಅಲ್ಲಿ ಬೋಟ್ ಪತ್ತೆಯಾಗದ ಕಾರಣ ಹೆಲಿಕಾಪ್ಟರ್ ಸಹಾಯ ಕೇಳಲಾಗಿತ್ತು.




ಆನಂತರ, ಕೊಚ್ಚಿಯಿಂದ ಬಂದಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರ ಮೇಲ್ಭಾಗದಿಂದ ಹಾರಾಡುತ್ತಾ ಮೀನುಗಾರಿಕಾ ಬೋಟಿನ ಬಗ್ಗೆ ಶೋಧ ನಡೆಸಿತ್ತು. ಮಳೆಯಿಂದಾಗಿ ವಾತಾವರಣ ಹದಗೆಟ್ಟಿದ್ದರೂ ಹಡಗಿನ ಜೊತೆ ಸೇರಿ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸಿದೆ. ಅ.25ರಂದು ಡೋರ್ನಿಯರ್ ಏರ್ ಕ್ರಾಫ್ಟ್ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟನ್ನು ಸಮುದ್ರ ನಡುವೆ ಪತ್ತೆಹಚ್ಚಿದ್ದು ಕೂಡಲೇ ಕೋಸ್ಟ್ ಗಾರ್ಡ್ ಹಡಗಿಗೆ ಮಾಹಿತಿ ರವಾನಿಸಿತ್ತು.
ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗು ಕೂಡಲೇ ಆ ಸ್ಥಳಕ್ಕೆ ಧಾವಿಸಿದ್ದು ಬೋಟಿನಲ್ಲಿದ್ದ ಎಲ್ಲ ಮೀನುಗಾರರನ್ನು ರಕ್ಷಣೆ ಮಾಡಿದ್ದಲ್ಲದೆ, ಅವರಿಗೆ ಆಹಾರ ನೀರು ಪೂರೈಸಿ ಅಪಾಯದಿಂದ ಪಾರು ಮಾಡಿದೆ. ಸಂತ ಏಂಟನಿ ಹೆಸರಿನ ಗೋವಾ ಮೂಲದ ಮೀನುಗಾರಿಕಾ ಬೋಟನ್ನು ಬಳಿಕ ಹಗ್ಗ ಕಟ್ಟಿ ಹೊನ್ನಾವರ ಬಂದರಿಗೆ ಎಳೆದು ತರಲಾಯಿತು. ಅದರಲ್ಲಿದ್ದ ಎಲ್ಲ 31 ಮೀನುಗಾರರನ್ನೂ ರಕ್ಷಣೆ ಮಾಡಲಾಗಿದೆ.
ಹವಾವಾನ ವೈಪರೀತ್ಯದ ನಡುವೆಯೂ ಕೋಸ್ಟ್ ಗಾರ್ಡ್ ಪಡೆಯು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಯಶಸ್ವೀ ಕಾರ್ಯಾಚರಣೆ ನಡೆಸಿದ್ದು ಸಮುದ್ರ ಮಧ್ಯೆ ಸಾವಿನ ದವಡೆಯಲ್ಲಿ ಸಿಕ್ಕಿಬಿದ್ದು ಒದ್ದಾಡಿದ್ದ ಮೀನುಗಾರರನ್ನು ರಕ್ಷಿಸಿ ಕರೆತಂದಿದೆ. ಮೀನುಗಾರಿಕಾ ಬೋಟಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಗಾಳಿ, ಮಳೆಯ ನಡುವೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿತ್ತು.
The Indian Coast Guard successfully rescued 31 fishermen from a Goa-based fishing boat that had been missing in the Arabian Sea for 11 days. After receiving information on October 24 that the vessel was lost about 100
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am