ಬ್ರೇಕಿಂಗ್ ನ್ಯೂಸ್
26-10-25 04:42 pm Mangalore Correspondent ಕರಾವಳಿ
ಮಂಗಳೂರು, ಅ.26 : 11 ದಿನಗಳಿಂದ ಅರಬ್ಬೀ ಸಮುದ್ರ ಮಧ್ಯೆ ನಾಪತ್ತೆಯಾಗಿದ್ದ ಗೋವಾ ಮೂಲದ 31 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಒಂದನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ಪತ್ತೆಹಚ್ಚಿದ್ದು, ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊನ್ನಾವರ ಬಂದರಿಗೆ ಕರೆತಂದಿದೆ.
ಮಂಗಳೂರು ಬಂದರಿನಿಂದ ನೂರು ನಾಟಿಕಲ್ ಮೈಲು ದೂರದಲ್ಲಿ ಗೋವಾ ಮೂಲದ ಬೋಟ್ ನಾಪತ್ತೆಯಾಗಿದ್ದಾಗಿ ಅ.24ರಂದು ಮಂಗಳೂರಿನ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಮಾಹಿತಿ ಬಂದಿತ್ತು. ಇದರಂತೆ, ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು ಕೊನೆಯ ಬಾರಿಗೆ ಮಿಸ್ಸಿಂಗ್ ಆಗಿದೆ ಎನ್ನಲಾದ ಜಾಗಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದರೆ ಅಲ್ಲಿ ಬೋಟ್ ಪತ್ತೆಯಾಗದ ಕಾರಣ ಹೆಲಿಕಾಪ್ಟರ್ ಸಹಾಯ ಕೇಳಲಾಗಿತ್ತು.




ಆನಂತರ, ಕೊಚ್ಚಿಯಿಂದ ಬಂದಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರ ಮೇಲ್ಭಾಗದಿಂದ ಹಾರಾಡುತ್ತಾ ಮೀನುಗಾರಿಕಾ ಬೋಟಿನ ಬಗ್ಗೆ ಶೋಧ ನಡೆಸಿತ್ತು. ಮಳೆಯಿಂದಾಗಿ ವಾತಾವರಣ ಹದಗೆಟ್ಟಿದ್ದರೂ ಹಡಗಿನ ಜೊತೆ ಸೇರಿ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸಿದೆ. ಅ.25ರಂದು ಡೋರ್ನಿಯರ್ ಏರ್ ಕ್ರಾಫ್ಟ್ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟನ್ನು ಸಮುದ್ರ ನಡುವೆ ಪತ್ತೆಹಚ್ಚಿದ್ದು ಕೂಡಲೇ ಕೋಸ್ಟ್ ಗಾರ್ಡ್ ಹಡಗಿಗೆ ಮಾಹಿತಿ ರವಾನಿಸಿತ್ತು.
ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗು ಕೂಡಲೇ ಆ ಸ್ಥಳಕ್ಕೆ ಧಾವಿಸಿದ್ದು ಬೋಟಿನಲ್ಲಿದ್ದ ಎಲ್ಲ ಮೀನುಗಾರರನ್ನು ರಕ್ಷಣೆ ಮಾಡಿದ್ದಲ್ಲದೆ, ಅವರಿಗೆ ಆಹಾರ ನೀರು ಪೂರೈಸಿ ಅಪಾಯದಿಂದ ಪಾರು ಮಾಡಿದೆ. ಸಂತ ಏಂಟನಿ ಹೆಸರಿನ ಗೋವಾ ಮೂಲದ ಮೀನುಗಾರಿಕಾ ಬೋಟನ್ನು ಬಳಿಕ ಹಗ್ಗ ಕಟ್ಟಿ ಹೊನ್ನಾವರ ಬಂದರಿಗೆ ಎಳೆದು ತರಲಾಯಿತು. ಅದರಲ್ಲಿದ್ದ ಎಲ್ಲ 31 ಮೀನುಗಾರರನ್ನೂ ರಕ್ಷಣೆ ಮಾಡಲಾಗಿದೆ.
ಹವಾವಾನ ವೈಪರೀತ್ಯದ ನಡುವೆಯೂ ಕೋಸ್ಟ್ ಗಾರ್ಡ್ ಪಡೆಯು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಯಶಸ್ವೀ ಕಾರ್ಯಾಚರಣೆ ನಡೆಸಿದ್ದು ಸಮುದ್ರ ಮಧ್ಯೆ ಸಾವಿನ ದವಡೆಯಲ್ಲಿ ಸಿಕ್ಕಿಬಿದ್ದು ಒದ್ದಾಡಿದ್ದ ಮೀನುಗಾರರನ್ನು ರಕ್ಷಿಸಿ ಕರೆತಂದಿದೆ. ಮೀನುಗಾರಿಕಾ ಬೋಟಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಗಾಳಿ, ಮಳೆಯ ನಡುವೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿತ್ತು.
The Indian Coast Guard successfully rescued 31 fishermen from a Goa-based fishing boat that had been missing in the Arabian Sea for 11 days. After receiving information on October 24 that the vessel was lost about 100
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm